Monday, March 24, 2025
spot_imgspot_img
spot_imgspot_img

ಮಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ :ಮೀನುಗಾರಿಕೆಗೆ ತೆರಳದಂತೆ ಜಿಲ್ಲಾಡಳಿತದಿಂದ ಸೂಚನೆ

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ಮಂಗಳೂರು : ಮುಂಗಾರು ಪೂರ್ವ ಮಳೆ ಅಬ್ಬರದ ನಡುವೆ ಇದೀಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮೇ 22 ರವರೆಗೆ ಮೀನುಗಾರಿಕೆಗೆ ತೆರಳದಂತೆ ಭಾರತೀಯ ಹವಾಮಾನ ಇಲಾಖೆ ಮುುನ್ಸೂಚನೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮೀನುಗಾರಿಕೆಗೆ ನಿರ್ಬಂಧ ಹೇರಲಾಗಿದೆ. ಜೊತೆಗೆ ದಕ್ಷಿಣ ಕನ್ನಡ ಮತ್ತು ಉಡುಪಿಯ ಮೀನುಗಾರರಿಗೂ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.

ಮೇ 20 ಮತ್ತು 22ರಂದು ಕರಾವಳಿಯಲ್ಲಿ ಪ್ರತಿಕೂಲ ಹವಾಮಾನ ಇರಲಿದ್ದು, ಅರಬ್ಬಿ ಸಮುದ್ರದಲ್ಲಿ ಗಂಟೆಗೆ 45 ಕಿ.ಮೀ ಯಿಂದ 55 ಕಿ.ಮಿ ವೇಗದಲ್ಲಿ ಗಾಳಿ ಬೀಸಲಿದೆ. ಗಾಳಿಯು ಗಂಟೆಗೆ 65 ಕಿ.ಮೀ. ವೇಗದಲ್ಲಿ ಕರಾವಳಿ ತೀರಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಮೀನುಗಾರರು ಈ ಅವಧಿಯಲ್ಲಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಬಾರದು ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚಿಸಿದೆ. ಈಗಾಗಲೇ ಸಮುದ್ರಕ್ಕೆ ತೆರಳಿರುವ ಮೀನುಗಾರಿಕಾ ದೋಣಿಗಳು ತಕ್ಷಣ ದಡಕ್ಕೆ ಮರಳಬೇಕು ಎಂದು ಜಿಲ್ಲಾಧಿಕಾರಿ ಕಚೇರಿಯ ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!