Thursday, April 18, 2024
spot_imgspot_img
spot_imgspot_img

ಕೆ.ಸಿ ರೋಡ್ ನಲ್ಲಿ ನಿಯಂತ್ರಣ ಕಳೆದು ರಸ್ತೆಗೆ ಉರುಳಿದ ಲಾರಿ: ಚಾಲಕ ಮೃತ್ಯು

- Advertisement -G L Acharya panikkar
- Advertisement -

ಬಂಟ್ವಾಳ: ಘನಗಾತ್ರದ ಲಾರಿಯೊಂದು ಚಲಿಸುತ್ತಿದ್ದಂತೆ ಚಾಲಕನ ನಿಯಂತ್ರಣ ಕಳೆದು ರಸ್ತೆಗೆ ಅಡ್ಡಲಾಗಿ ಬಿದ್ದು ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಕಲ್ಲಡ್ಕ ಸಮೀಪದ ಅಮ್ಟೂರು ಕ್ರಾಸ್ ಬಳಿ ಕೆ.ಸಿ.ರೋಡ್ ಎಂಬಲ್ಲಿ ಸಂಭವಿಸಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಘನಗಾತ್ರದ ಲಾರಿಯಲ್ಲಿ ಅಧಿಕ ಭಾರದ ಇಲೆಕ್ಟ್ರಿಕಲ್ ಸಂಬಂಧಿಸಿದ ವಯರ್ ಗಳನ್ನು (ಕ್ವಾಯಿಲ್) ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಚಲಿಸುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾಗಿದೆ.

ಘಟನೆಯಲ್ಲಿ ನೆಲ್ಯಾಡಿ ನಿವಾಸಿ ಚಾಲಕ ಅಕ್ರಮ್ ಭಾಷಾ ಗಂಭೀರ ವಾಗಿ ಗಾಯಗೊಂಡಿದ್ದರು. ಕೂಡಲೇ
ಗಾಯಗೊಂಡ ಅಕ್ರಮ್ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರ ವಾಗಿ ಗಾಯಗೊಂಡಿದ್ದ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಚಾಲಕ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆಯ ಘಟನೆಗೆ ಕಾರಣವೆನ್ನಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಠಾಣಾ ಪೋಲೀಸರು ಭೇಟಿ ನೀಡಿದ್ದಾರೆ.

- Advertisement -

Related news

error: Content is protected !!