- Advertisement -
- Advertisement -
ಲಂಚ ಸ್ವೀಕರಿಸುವಾಗ ಬಿಬಿಎಂಪಿ ಕಂದಾಯ ಸಿಬ್ಬಂದಿ ಲೋಕಾ ಬಲೆಗೆ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪೊಲೀಸರು ಇಬ್ಬರನ್ನು ಬಂಧಿಸಿದ್ದು ಒಬ್ಬಾತ ಪರಾರಿಯಾಗಿದ್ದಾನೆ.
ಬಿಬಿಎಂಪಿ ವಾರ್ಡ್ ನಂ.166 ರ ರೆವೆನ್ಯೂ ಇನ್ಸ್ ಪೆಕ್ಟರ್ ರಾಜಗೋಪಾಲ್ ಪರಾರಿಯಾಗಿದ್ದು, ಎಫ್ಡಿಎ ರಾಘವೇಂದ್ರ, ಡಾಟಾ ಎಂಟ್ರಿ ಆಪರೇಟರ್ ಸುರೇಶ್ ದತ್ತಾರನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಖಾತೆ ಬದಲಾವಣೆ ಮಾಡಿಕೊಡಲು ಮಾಚೋಹಳ್ಳಿಯ ಅರುಣ್ ಎಂಬಾತನಿಂದ 1 ಲಕ್ಷದ 25 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 1 ಲಕ್ಷ ಹಣ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕೇಸ್ ದಾಖಲಿಸಿ ಆರೋಪಿಗಳಿಬ್ಬರ ಬಂಧನ ಮಾಡಲಾಗಿದೆ.
- Advertisement -