Friday, March 29, 2024
spot_imgspot_img
spot_imgspot_img

ಬಿ.ಸಿ.ರೋಡ್ ಕೃಷಿ ಉತ್ಸವ, ಕಲೋತ್ಸವ ಡಾ.ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

- Advertisement -G L Acharya panikkar
- Advertisement -

ಬಂಟ್ವಾಳ: ಚಿಣ್ಣರಲೋಕದ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಬಂಟ್ವಾಳ ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಬಿ.ಸಿ.ರೋಡ್ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ಫೆ.11ರಿಂದ ನಡೆಯಲಿರುವ ಕೃಷಿ ಉತ್ಸವ ಮತ್ತು ಕಲೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಕೃಷಿ ಉತ್ಸವ ಮತ್ತು ಕಲೋತ್ಸವ ಸಮಿತಿ ಅಧ್ಯಕ್ಷ ಸುದರ್ಶನ್ ಜೈನ್,   ಚಿಣ್ಣರ ಲೋಕದ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಸ್ಥಾಪಕ, ಸಂಚಾಲಕ ಮೋಹನಾದಾಸ್ ಕೊಟ್ಟಾರಿ, ಕೃಷಿ ಉತ್ಸವ ಸಮಿತಿ ಸಂಚಾಲಕ  ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ, ಸ್ವಾಗತ ಸಮಿತಿ ಅಧ್ಯಕ್ಷ ಸೀತಾರಾಮ ಶೆಟ್ಟಿ ಕಾಂತಾಡಿ ಗುತ್ತು,ಗೌರವ ಸಲಹೆಗಾರ ಪ್ರಕಾಶ್ ಬಿ.ಶೆಟ್ಟಿ ಶ್ರೀ ಶೈಲ, ನಿರ್ದೇಶಕ ದೇವಪ್ಪ ಕುಲಾಲ್ ಪಂಜಿಕಲ್ಲು ಉಪಸ್ಥಿತರಿದ್ದರು.

- Advertisement -

Related news

error: Content is protected !!