- Advertisement -
- Advertisement -





ಬೆಳಗಾವಿ: ಈಜಲು ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಕ್ಕುಂದ ಹೊರವಲಯದ ಮಲಪ್ರಭಾ ನದಿಯಲ್ಲಿ ನಡೆದಿದೆ.
ಈಜಲು ತೆರಳಿದ್ದ ಮಹೇಶ್ ಗಣಾಚಾರಿ(15) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಅಗ್ನಿಶಾಮಕ ದಳ ಸಿಬ್ಬಂದಿ ಬಾಲಕನ ಮೃತದೇಹ ನೀರಿನಿಂದ ಹೊರತೆಗೆದು ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನಾ ಸ್ಥಳಕ್ಕೆ ಬೈಲಹೊಂಗಲ ಸಿಪಿಐ ಪ್ರಮೋದ ಯಲಿಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ವರದಿಯಿಂದ ತಿಳಿದುಬಂದಿದೆ.
- Advertisement -








