Tuesday, July 21, 2026
spot_imgspot_img
spot_imgspot_img

ಬೆಳಗಾವಿ: ಭೀಕರ ರಸ್ತೆ ಅಪಘಾತ; ಇಬ್ಬರು ಮೃತ್ಯು

- Advertisement -
- Advertisement -

ಬೆಳಗಾವಿ: ನಗರದ ಯಡಿಯೂರಪ್ಪ ಮಾರ್ಗದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ವಾಹನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಕ್ಕಪೇಟೆ ನಿವಾಸಿ ವಾಸೀಮ್(28) ಹಾಗೂ ಮುಬಾರಕ್(22) ಎಂದು ಗುರುತಿಸಲಾಗಿದೆ. ಶಿಕಾರಿಪುರ ತಾಲೂಕಿನ ಮುಗಳಿಕೊಪ್ಪ ಗ್ರಾಮದ ಬಸವರಾಜ ಹಂಚಿನಮನಿ(37) ಎಂಬವರು ಗಾಯಗೊಂಡ ಚಾಲಕರಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ಕೊಲ್ಲಾಪುರದಿಂದ ಶಿವಮೊಗ್ಗ ಜಿಲ್ಲೆಯ ಸೊರಬಕ್ಕೆ ಕೋಳಿಗಳನ್ನು ಸಾಗಿಸುತ್ತಿದ್ದ ಗೂಡ್ಸ್‌ ವಾಹನವು ಬೆಳಗಿನ ಜಾವ ಬೆಳಗಾವಿ ಹೊರವಲಯದಲ್ಲಿ ಸಂಚರಿಸುತ್ತಿದ್ದಾಗ ಚಾಲಕನಿಗೆ ನಿದ್ರೆಯ ಮಂಪರು ಆವರಿಸಿದ್ದರಿಂದ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಗೂಡ್ಸ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನ ಪಕ್ಕದಲ್ಲಿ ಕುಳಿತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ವಾಹನದಲ್ಲಿದ್ದ ನೂರಾರು ಕೋಳಿಗಳು ಕೂಡ ಸಾವನ್ನಪ್ಪಿವೆ.

ಗಾಯಾಳು ಚಾಲಕನನ್ನು ಹಾಗೂ ಮೃತದೇಹಗಳನ್ನು ತಕ್ಷಣವೇ ಬೆಳಗಾವಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಹಿರೇಬಾಗೆವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂಬುದಾಗಿ ವರದಿಯಿಂದ ತಿಳಿದುಬಂದಿದೆ.

- Advertisement -

Related news

error: Content is protected !!