Thursday, July 23, 2026
spot_imgspot_img
spot_imgspot_img

ಬೆಳಗಾವಿ: ಕಳ್ಳತನ ಪ್ರಕರಣ; ಆರೋಪಿಯ ಬಂಧನ

- Advertisement -
- Advertisement -

ಬೆಳಗಾವಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ 1.2 ಕೆಜಿ ಚಿನ್ನ ಕಳ್ಳತನ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಮಹಾಂತೇಶ ನಗರದ ನಿವಾಸಿ ಸುರೇಶ ನಾಯಕ (32) ಎಂದು ಗುರುತಿಸಲಾಗಿದೆ. ಕಾರು ಮತ್ತು ಬೈಕ್​ಗಳು ಸೇರಿ ಒಂದೂವರೆ ಲಕ್ಷ ಹಣ ಮತ್ತು ಕೆಜಿಗಟ್ಟಲೆ ಚಿನ್ನವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಹುಬ್ಬಳ್ಳಿಯ ಖ್ಯಾತ ವೈದ್ಯ ಡಾ.ಸುರೇಶ ದುಗ್ಗಾಣಿ ಸಹೋದರ ವಿಶ್ವನಾಥ ಅವರ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿನ ಮನೆಯಲ್ಲಿ ಕಳ್ಳತನ ನಡೆದಿದ್ದು, ಅಕ್ಟೋಬರ್ 23ರಂದು ಯಮಕನಮರಡಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಕುಟುಂಬ ಸಮೇತ ವಿಶ್ವನಾಥ ‌ದುಗ್ಗಾಣಿ ಅಕ್ಟೋಬರ್ ‌16ರಂದು ಬೆಂಗಳೂರಿಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದನ್ನು ಒಂದು ವಾರ ಗಮನಿಸಿದ್ದ ಆರೋಪಿ ಸುರೇಶ, ಅಕ್ಟೋಬರ್ 22ರ ರಾತ್ರಿ ‌ವಿಶ್ವನಾಥ್ ಮನೆಗೆ ನುಗ್ಗಿ ಕೋಟ್ಯಂತರ ರೂ. ಮೌಲ್ಯದ ಚಿನ್ನ ಕದ್ದಿದ್ದ. ಒಂದೇ ಗಂಟೆಯಲ್ಲಿ ಮನೆಯಲ್ಲಿದ್ದ 1,250 ಗ್ರಾಂ ಚಿನ್ನ, ಎಂಟೂವರೆ ಕೆಜಿ ಬೆಳ್ಳಿ, ಒಂದೂವರೆ ಲಕ್ಷ ನಗದು ದೋಚಿ ಎಸ್ಕೇಪ್​ ಆಗಿದ್ದ.

ಕದ್ದ ಚಿನ್ನಾಭರಣ ಮಾರಿ ಬಂದ ಹಣದಿಂದ ಗೋವಾದಲ್ಲಿ ಮಜಾ ಮಾಡ್ತಿದ್ದ. ಮೊಬೈಲ್​ ಕೂಡ ಹೊಂದಿರದ ಈತ, ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಲು ಬೈಕ್ ಮಾಡಿಫೈ ಮಾಡಿದ್ದ. ಹತ್ತು ನಿಮಿಷಕ್ಕೊಮ್ಮೆ ಬೈಕ್ ಲೈಟ್ ಕಲರ್ ಚೇಂಜ್ ಆಗುವ ರೀತಿ ಅದನ್ನು ರೆಡಿಮಾಡಿಸಿಕೊಂಡಿದ್ದ. 14 ದಿನಗಳ ಕಾಲ ರಾಷ್ಟ್ರೀಯ ಹೆದ್ದಾರಿಯ ಎಲ್ಲ ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿರುವ ಪೊಲೀಸರು, ಸುರೇಶ ನಾಯಕ ಧರಿಸುವ ಶೂ, ಜಾಕೆಟ್ ಮತ್ತು ರೆಡ್ ಕ್ಯಾಪ್ ಆಧರಿಸಿ ಬಂಧಿಸಿದ್ದಾರೆ.

ಕದ್ದ ಚಿನ್ನವನ್ನು ಮಹಾರಾಷ್ಟ್ರದ ಕೊಲ್ಲಾಪುರಕ್ಕೆ ಮಾರಲೆಂದು ಸುರೇಶ್​ ಹೊರಟಿದ್ದ ವೇಳೆ, ಮಹೀಂದ್ರಾ ಥಾರ್​ ವಾಹನದಲ್ಲಿದ್ದ ಗೋಲ್ಡ್​ ಸಮೇತ ಹಿಡಿದಿದ್ದಾರೆ. ಸುರೇಶ ನಾಯಕ ವಿರುದ್ಧ ಒಟ್ಟು 22 ಕಳ್ಳತನ ‌ಪ್ರಕರಣಗಳು ದಾಖಲಾಗಿದ್ದು, ಥಾರ್ ವಾಹನ, ಕವಾಸಕಿ, ಪಲ್ಸರ್ ಬೈಕ್​ಗಳು, ಒಂದೂವರೆ ಲಕ್ಷ ಹಣ ಹಾಗೂ ಕೆಜಿಗಟ್ಟಲೆ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

- Advertisement -

Related news

error: Content is protected !!