Monday, June 30, 2025
spot_imgspot_img
spot_imgspot_img

ಬೆಳ್ಳಾರೆ: ದಿಢೀರ್‌ ಅಸ್ವಸ್ಥಗೊಂಡು ಎಂಬಿಎ ವಿದ್ಯಾರ್ಥಿ ಮೃತ್ಯು..!!

- Advertisement -
- Advertisement -
vtv vitla

ಬೆಳ್ಳಾರೆ: ಎಂಬಿಎ ವಿದ್ಯಾರ್ಥಿಯೋರ್ವ ದಿಢೀರ್‌ ಅಸ್ವಸ್ಥಗೊಂಡು ನಿಧನ ಹೊಂದಿದ ಘಟನೆಯೊಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ.

ಮೃತ ಯುವಕನನ್ನು ಶರತ್‌ ಜೋಶಿ (21) ಎಂದು ಹೇಳಲಾಗಿದೆ. ಇವರು ಬೆಳ್ಳಾರೆಯ ಉದ್ಯಮಿ ಪ್ರಸಾದ್‌ ಹಾರ್ಡ್‌ವೇರ್ಸ್‌ನ ಮಾಲಕ ಸುಬ್ರಹ್ಮಣ್ಯ ಜೋಶಿಯವರ ಪುತ್ರ.

ಮಂಗಳೂರಿನ ಶ್ರೀನಿವಾಸ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದ ಶರತ್‌ ಜೋಷಿ ಅವರು ಪರೀಕ್ಷೆ ಬರೆದು ನಿನ್ನೆ ಮನೆಗೆ ಬಂದಿದ್ದರು. ಆದರೆ ರಾತ್ರಿ ಇದ್ದಕ್ಕಿದಂತೆ ತೀವ್ರ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ತರಲಾಯಿತಾದರೂ ಅವರು ಮೃತ ಪಟ್ಟಿದ್ದಾರೆ ಎಂದು ವರದಿಯಾಗಿದೆ.

ದಿಢೀರ್‌ ಹೃದಯಾಘಾತಕ್ಕೆ ಒಳಗಾಗಿ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಮರಣೋತ್ತರ ಪರೀಕ್ಷೆಯು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು, ಸಾವಿಗೆ ಕಾರಣವೇನೆಂದು ಇನ್ನಷ್ಟೇ ತಿಳಿಯಬೇಕಿದೆ. ಮೃತರು ತಂದೆ, ತಾಯಿ ಸಹೋದರಿ, ಕುಟುಂಬಸ್ಥರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

- Advertisement -

Related news

error: Content is protected !!