




ಬೆಳ್ಳಾರೆ: ಮಾದಕವಸ್ತು ಸೇವನೆ ಮಾಡಿ ವ್ಯಕ್ತಿಯೋರ್ವ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಗ್ರಾಮದ ಶಾಂತಿನಗರ ಮೆಸ್ಕಾಂ ಸಬ್ ಸ್ಟೇಷನ್ ಬಳಿ ನಡೆದಿದೆ.
ಆರೋಪಿಯನ್ನು ಸವಣೂರು ಗ್ರಾಮ, ಕಡಬ ನಿವಾಸಿ ಮಜೀದ್ (35) ಎಂದು ಗುರುತಿಸಲಾಗಿದೆ.
ಡಿ.7 ರಂದು ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಗ್ರಾಮದ ಶಾಂತಿನಗರ ಮೆಸ್ಕಾಂ ಸಬ್ ಸ್ಟೇಷನ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಈರಯ್ಯ ಡಿ ಎನ್ ಪೊಲೀಸ್ ಉಪನಿರೀಕ್ಷಕರು ಬೆಳ್ಳಾರೆ ಪೊಲೀಸ್ ಠಾಣೆರವರು ಠಾಣಾ ಸಿಬ್ಬಂದಿಗಳ ಜೊತೆ ತೆರಳಿ ವಿಚಾರಣೆ ನಡೆಸಿದಾಗ ವ್ಯಕ್ತಿ ಸವಣೂರು ಗ್ರಾಮ, ಕಡಬ ನಿವಾಸಿ ಮಜೀದ್ (35) ಎಂಬುದಾಗಿ ತಿಳಿದುಬಂದಿರುತ್ತದೆ.
ಆತನು ಮಾದಕವಸ್ತು ಸೇವನೆ ಮಾಡಿರುವಂತೆ ಕಂಡುಬಂದ ಹಿನ್ನೆಲೆಯಲ್ಲಿ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು ಮಾದಕವಸ್ತು ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ . 88/2024 ಕಲಂ 27(b) N.D.P.S Act ರಂತೆ ಪ್ರಕರಣ ದಾಖಲಾಗಿರುತ್ತದೆ.