Saturday, June 28, 2025
spot_imgspot_img
spot_imgspot_img

ಬೆಳ್ತಂಗಡಿ: ಕಾರುಗಳ ನಡುವೆ ಅಪಘಾತ; ಮಗು ಸೇರಿ ನಾಲ್ವರಿಗೆ ಗಾಯ..!

- Advertisement -
- Advertisement -

ಬೆಳ್ತಂಗಡಿ: ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಪಿಲ್ಯ ಸಮೀಪ ನಡೆದಿದೆ.

ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಕಾರಿಗೆ ಹಾಗೂ ಉಡುಪಿ ಕಡೆಯಿಂದ ಬರುತಿದ್ದ ಕಾರಿನ ನಡುವೆ ಪಿಲ್ಯ ಸಮೀಪದ ಗೋಳಿ ಕಟ್ಟೆ ನಾವರ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿ ಅಪಘಾತ ನಡೆದಿದೆ.

ಅಪಘಾತದ ರಭಸಕ್ಕೆ ಇಕೋ ಕಾರಿನಲ್ಲಿದ್ದ ಮಗು ಸೇರಿದಂತೆ ನಾಲ್ವರಿಗೆ ಗಾಯಗಳಾಗಿದ್ದು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣವೇ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ವೇಣೂರು ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಕಾರಿನಲ್ಲಿದ್ದವರ ಮಾಹಿತಿ ತಿಳಿದುಬಂದಿಲ್ಲ.

- Advertisement -

Related news

error: Content is protected !!