Friday, May 3, 2024
spot_imgspot_img
spot_imgspot_img

ಬೆಳ್ತಂಗಡಿ: ಮಗ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ತಂದೆ ಕೂಡ ಆತ್ಮಹತ್ಯೆ…!

- Advertisement -G L Acharya panikkar
- Advertisement -

ಬೆಳ್ತಂಗಡಿ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆಯ ಪೆರ್ಲದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೋಗೀಶ್ ಪೂಜಾರಿ ಮಗ ಯಶ್ಚಿತ್ (14) ಜ.4 ರಂದು ಕ್ಷುಲಕ ವಿಚಾರದಲ್ಲಿ ಮನೆಯೊಳಗಿನ ಅಡ್ಡಕ್ಕೆ ತಾಯಿಯ ಸೀರೆಯಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಜ.14 ರಂದು ಯಕ್ಷಿತ್ ಉತ್ತರಕ್ರಿಯೆ ನಡೆದಿದ್ದು. ಇದರ ಬೆನ್ನಲ್ಲೆ ಜ.16 ರಂದು(ಇಂದು) ಮನೆಯಲ್ಲಿ ತಂದೆ ಯೋಗೀಶ್ ಪೂಜಾರಿ(41) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಲಗಳ ಪ್ರಕಾರ ತಂದೆ ಯೋಗೀಶ್ ಪೂಜಾರಿ ಮಗನ ಆತ್ಮಹತ್ಯೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!