


ಬೆಳ್ತಂಗಡಿ: ವ್ಯಕ್ತಿಯೋರ್ವರಿಗೆ ಅವಾಚ್ಯ ಶಬ್ದದಿಂದ ಬೈದು ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು ಕಳೆಂಜ ಗ್ರಾಮದ ಎಣ್ಣೆಗದ್ದೆ ಮನೆ ಎಂಬಲ್ಲಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿಯನ್ನು ಚನ್ನಗೌಡ (71) ಎಂದು ಗುರುತಿಸಲಾಗಿದೆ.
ತೋಟತ್ತಾಡಿ ಗ್ರಾಮ ಬೆಳ್ತಂಗಡಿ ಚನ್ನಗೌಡ ದೂರಿನಂತೆ ವ್ಯಕ್ತಿ ತನ್ನ ಅಳಿಯ ಹೊನ್ನಪ್ಪಗೌಡ ಎಂಬವರ ಮನೆಯಾದ ಬೆಳ್ತಂಗಡಿ ತಾಲೂಕು ಕಳೆಂಜ ಗ್ರಾಮದ ಎಣ್ಣೆಗದ್ದೆ ಮನೆ ಎಂಬಲ್ಲಿಗೆ ಬಂದಿರುತ್ತಾರೆ. ಈ ವೇಳೆ ಅಲ್ಲಿದ್ದಾಗ, ರಾತ್ರಿ ಸಮಯ ಆರೋಪಿಗಳಾದ ಲಕ್ಷ್ಮಿನಾರಾಯಣ ಮತ್ತು ಆತನ ಹೆಂಡತಿ ವೇದಾವತಿ ಎಂಬವರು ಚನ್ನಗೌಡರವರನ್ನು ಇಲ್ಲಿಗೆ ಯಾಕೆ ಬಂದಿದ್ದಿಯಾ ಎಂದು ಪ್ರಶ್ನಿಸಿ, ಅವಾಚ್ಯ ಶಬ್ದದಿಂದ ಬೈದು, ಹಲ್ಲೆ ನಡೆಸಿರುತ್ತಾರೆ.
ಹಲ್ಲೆಯಿಂದಾದ ಗಾಯಗಳಿಗೆ ಚಿಕಿತ್ಸೆಗಾಗಿ ಚನ್ನಗೌಡರವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಹೋಗಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡಿಯುತ್ತಿದ್ದಾರೆ ಈ ಬಗ್ಗೆ ನೀಡಿದ ದೂರಿನ ಮೇರೆಗೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ, ಅಪರಾಧ ಕ್ರಮಾಂಕ: 52/2024 ಕಲಂ: 504, 324, ಜೊತೆಗೆ 34 ಐ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.