- Advertisement -
- Advertisement -


ಬೆಳ್ತಂಗಡಿ: ಕೊಲೆ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ ಘಟನೆ ಬೆಳ್ತಂಗೆಇಯಲ್ಲಿ ನಡೆದಿದೆ
ಬಂಧಿತ ಆರೋಪಿಯನ್ನು ಮಂಗಳೂರು ನಗರದ ಮೂಡಬಿದ್ರೆ ತಾಲೂಕಿನ ಪುತ್ತಿಗೆ ಗ್ರಾಮದ ರಮಲ್ತ್ ಮಂಜಿಲ್ ಮನೆ ಹಂಡೇಲು ಉಮ್ಮಾರಬ್ಬ ಮಗನಾದ ಮಹಮದ್ ಇಕ್ಯಾಲ್ (27) ಎಂದು ಗುರುತಿಸಲಾಗಿದೆ.
ವೇಣೂರು ಪೊಲೀಸ್ ಠಾಣೆಯಲ್ಲಿ 2024 ರಲ್ಲಿ ದಾಖಲಾಗಿದ್ದ ಕಲಂ: 109 BNS -2023 ಕೊಲೆ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಜ.09 ರಂದು ವೇಣೂರು ಪೋಲೀಸ್ ಠಾಣೆಯ ಸಬ್ ಇನ್ಸೆಕ್ಟರ್ ಶ್ರೀಶೈಲ ಮತ್ತು ಸಬ್ ಇನ್ಸೆಕ್ಟರ್ ಆನಂದ ನೇತೃತ್ವದ ಪೊಲೀಸರ ತಂಡ ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ 15 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
- Advertisement -