Friday, May 3, 2024
spot_imgspot_img
spot_imgspot_img

ಬೆಳ್ತಂಗಡಿ : ಅಕ್ರಮ ಮರಳು ಸಾಗಾಟದ ಲಾರಿ ವಶ

- Advertisement -G L Acharya panikkar
- Advertisement -
This image has an empty alt attribute; its file name is medical-lakshmi-ganesh-1024x683.jpg

ಬೆಳ್ತಂಗಡಿ :ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ನಡೆದಿದೆ.

ಬೆಳ್ತಂಗಡಿ ಪೊಲೀಸ್ ಠಾಣಾ ಪಿಎಸ್ಟ್ ಧನರಾಜ್ ಟಿ ಎಂ ನೇತೃತ್ವದ ಪೊಲೀಸರು ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ, ಕೆಎ-21- ಬಿ-5262 ನೋಂದಣಿ ಸಂಖ್ಯೆಯ ಲಾರಿಯನ್ನು ತಡೆದಾಗ, ಲಾರಿ ಚಾಲಕ ರಂಜಿತ್ ಎಂಬಾತ ಲಾರಿಯನ್ನು ನಿಲ್ಲಿಸಿ ತನ್ನ ಸಹಚರ ರಾಧಾಕೃಷ್ಣ ಕಡಿರುದ್ಯಾವರ ಎಂಬಾತನೊಂದಿಗೆ ಸ್ಥಳದಿಂದ ಓಡಿ ಹೋಗಿದ್ದಾರೆ. ಲಾರಿಯನ್ನು ಪೊಲೀಸರು ಪರಿಶೀಲನೆ ನಡೆಸಿದಾಗ ಯಾವುದೇ ದಾಖಲಾತಿ ಇಲ್ಲದೆ ಚಾಲಕ ಹಾಗೂ ಸಹಚರ ಎಲ್ಲಿಂದಲೋ ಕಳವು ಮಾಡಿಕೊಂಡು ಬಂದ ಸುಮಾರು 15 ಸಾವಿರ ರೂಪಾಯಿ ಮೌಲ್ಯದ ಮರಳನ್ನು ಲಾರಿಯಲ್ಲಿ ತುಂಬಿಸಿಕೊಂಡು ಸಾಗಾಟ ಮಾಡಿರುವುದು ಪತ್ತೆಯಾಗಿದೆ.ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ. ನಂ: 122/2023 ಕಲಂ:379 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!