Saturday, June 28, 2025
spot_imgspot_img
spot_imgspot_img

ಬೆಳ್ತಂಗಡಿ: ತಲೆ ಮೇಲೆ ದಾರಂದ ಬಿದ್ದು ಬಾಲಕಿ ಸಾವು..!

- Advertisement -
- Advertisement -

ಬೆಳ್ತಂಗಡಿ: ಹೊಸ ಮನೆಗೆ ಅಳವಡಿಸಲು ತಂದು ಇಟ್ಟಿದ್ದ ದಾರಂದ ತಲೆ ಮೇಲೆ ಬಿದ್ದು ಬಾಲಕಿ ಮೃತಪಟ್ಟ ಘಟನೆ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾ ಕೊನಲೆಯಲ್ಲಿ ನಡೆದಿದೆ.

ಮೃತಪಟ್ಟ ಬಾಲಕಿ ಕೊನಲೆ ನಿವಾಸಿ ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿಯ ಪುತ್ರಿ ಕೇರ್ಯಾ ಸರಕಾರಿ ಶಾಲೆಯ 1ನೇ ತರಗತಿಯ ವಿದ್ಯಾರ್ಥಿನಿ ಅಲ್ಪಿಯಾ (6) ಎಂದು ಗುರುತಿಸಲಾಗಿದೆ.

ಬಾಲಕಿಯ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದು, ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸಲು ಮನೆಯ ಪಕ್ಕದಲ್ಲಿ ದಾರಂದವನ್ನು ತಂದಿರಿಸಿದ್ದರು. ಈ ಸಂದರ್ಭದಲ್ಲಿ ಬಾಲಕಿ ಅದರ ಪಕ್ಕದಲ್ಲಿ ಆಟವಾಡುತ್ತಿದ್ದಾಗ ದಾರಂದ ಆಕೆಯ ತಲೆಗೆ ಬಿದ್ದು ಗಂಭೀರ ಗಾಯವಾಗಿತ್ತು. ಕೂಡಲೇ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಬಾಲಕಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

- Advertisement -

Related news

error: Content is protected !!