Sunday, April 28, 2024
spot_imgspot_img
spot_imgspot_img

ಬೆಳ್ತಂಗಡಿ: ಮೂರು ವಾಹನಗಳಲ್ಲಿ ಅಕ್ರಮ ಗೋ ಸಾಗಾಟ; 8 ಜಾನುವಾರುಗಳ ರಕ್ಷಣೆ- ಬಿಜೆಪಿ ಕಾರ್ಯಕರ್ತರ ಸಹಿತ ನಾಲ್ವರ ಬಂಧನ

- Advertisement -G L Acharya panikkar
- Advertisement -

ಬೆಳ್ತಂಗಡಿ : ಹಿಂಸಾತ್ಮಕ ರೀತಿಯಲ್ಲಿ ಮೂರು ವಾಹನಗಳಲ್ಲಿ ಅಕ್ರಮವಾಗಿ ಎಂಟು ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿ, ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.

ಸಕ್ರಿಯ ಬಿಜೆಪಿ ಕಾರ್ಯಕರ್ತರೆನ್ನಲಾದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಪ್ರಮೋದ್ ಸಾಲ್ಯಾನ್, ಒಳಗದ್ದೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ ಜಿಲ್ಲೆಯ ಕಸಬಾ ಹೋಬಳಿ, ಅರಕಲಗೂಡು ನಿವಾಸಿ ಚೆನ್ನಕೇಶವ ಮತ್ತು ಹೊಳೆನರಸೀಪುರ ನಿವಾಸಿ ಸಂದೀಪ್ ಹಿರೇಬೆಳಗುಳಿ ಬಂಧಿತ ಆರೋಪಿಗಳಾಗಿದ್ದಾರೆ.

ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಧರ್ಮಸ್ಥಳ ಠಾಣೆಯ ಎಸ್ ಐ ಅನಿಲ್ ಕುಮಾರ್ ನೇತೃತ್ವದ ತಂಡ ಜು.12ರಂದು ರಾತ್ರಿ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮ ಮಂದಿರದ ಬಳಿ ವಾಹನಗಳನ್ನು ತಪಾಸಣೆ ಮಾಡುತ್ತಿತ್ತು. ರಾತ್ರಿ 8.45ರ ಸುಮಾರಿಗೆ ಉಜಿರೆ ಕಡೆಯಿಂದ ಧರ್ಮಸ್ಥಳದತ್ತ ಬರುತ್ತಿದ್ದ ಎರಡು ಪಿಕಪ್ ಸೇರಿದಂತೆ ಮೂರು ವಾಹನಗಳಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ ಎನ್ನಲಾಗಿದೆ.

ವಾಹನದಲ್ಲಿದ್ದವರನ್ನು ಪೊಲೀಸರು ವಿಚಾರಿಸಿದಾಗ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಗೋ ಸಾಗಾಟಕ್ಕೆ ಬಳಸಿದ ವಾಹನ ಸಹಿತ ಮೂರು ವಾಹನಗಳು, 6 ದನ ಮತ್ತು 2 ಗಂಡು ಕರುಗಳನ್ನು ವಶಪಡಿಸಿಕೊಂಡು, ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!