Monday, June 30, 2025
spot_imgspot_img
spot_imgspot_img

ಬೆಳ್ತಂಗಡಿ: ಅಕ್ರಮ ಮರಳು ಸಾಗಾಟ; ವಾಹನ ಸಹಿತ ಆರೋಪಿಗಳಿಬ್ಬರು ಪೊಲೀಸ್ ವಶ..!

- Advertisement -
- Advertisement -

ಬೆಳ್ತಂಗಡಿ: ಅಕ್ರಮವಾಗಿ, ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿದ್ದು ಆರೋಪಿಗಳು ಸಹಿತ ವಾಹನಗಳನ್ನು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ತಾಲೂಕು ವೇಣೂರು ಗ್ರಾಮದ ಪಲ್ಗುಣಿ ನದಿಯಲ್ಲಿ ನಡೆದಿದೆ.

ಆರೋಪಿಗಳನ್ನು ಕರಿಮಣೇಲು ಗ್ರಾಮ, ಬೆಳ್ತಂಗಡಿ ನಿವಾಸಿ ಸತೀಶ್‌ (44) ಮತ್ತು ಮೂಡುಕೋಡಿ ಗ್ರಾಮ, ಬೆಳ್ತಂಗಡಿ ನವೀನ್‌ (35) ಎಂದು ಗುರುತಿಸಲಾಗಿದೆ.

ರಾತ್ರಿ ವೇಳೆ ಬೆಳ್ತಂಗಡಿ ತಾಲೂಕು ವೇಣೂರು ಗ್ರಾಮದ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ, ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ‌ ಮೇರೆಗೆ, ಶ್ರೀಶೈಲ್‌ ಡಿ ಮುರಗೋಡ್‌ ಪಿ.ಎಸ್‌.ಐ ವೇಣೂರು ಪೊಲೀಸ್ ಠಾಣೆರವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋದಾಗ, ವೇಣೂರು ಡ್ಯಾಂ ಬಳಿ ಪಲ್ಗುಣಿ ನದಿಯಲ್ಲಿ, ಆರೋಪಿಗಳು ನದಿಯಿಂದ ಮರಳು ತೆಗೆದು, ಕೆ ಎ 12 5150 ಹಾಗೂ ಕೆ ಎ 19 ಎಎ 4650ನೇ ಪೀಕಪ್‌ ಗಳಲ್ಲಿ ತಲಾ 30 ಬುಟ್ಟಿಗಳಷ್ಟು ಮರಳನ್ನು ತುಂಬಿಸಿರುವುದು ಕಂಡುಬಂದಿರುತ್ತದೆ.

ಆರೋಪಿಗಳು ಸಂಬಂದಪಟ್ಟ ಇಲಾಖೆಯಿಂದ ಯಾವುದೇ ಅನುಮತಿಯನ್ನು ಪಡೆಯದೇ ಅನಧೀಕೃತವಾಗಿ ನದಿಯಿಂದ ಅಕ್ರಮವಾಗಿ ಮರಳನ್ನು ಕಳವು ಮಾಡಿಕೊಂಡು ಸಾಗಾಟ ಮಾಡುತ್ತಿರುವುದು ಕಂಡು ಬಂದ ಮೇರೆಗೆ, ವಾಹನಗಳನ್ನು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದು, ವೇಣೂರು ಠಾಣೆಯಲ್ಲಿ ಅಕ್ರ: 37/2024 ಕಲಂ: 379 ಜೊತೆಗೆ 34 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!