Saturday, June 20, 2026
spot_imgspot_img
spot_imgspot_img

ಬೆಳ್ತಂಗಡಿ: ಜಮೀನು ವಿವಾದ: 25 ಮೇಕೆಗಳ ತಲೆ ಕಡಿದು ಫೋಟೋ ಇಟ್ಟು ವಾಮಾಚಾರ..!

- Advertisement -
- Advertisement -

ಬೆಳ್ತಂಗಡಿ: ಎರಡು ವ್ಯಕ್ತಿಗಳ ನಡುವೆ ಹಲವು ವರ್ಷಗಳಿಂದ ನಡೆಯುತ್ತಿದ್ದ ಜಮೀನು ವಿವಾದ ಸಂಬಂಧ ಇದೀಗ ಜಾಗವನ್ನು ಪ್ರವೇಶಿಸುವ ಗೇಟಿನ ಮುಂದೆ 25 ಮೇಕೆಯ ತಲೆ ಕಡಿದು ಅದಕ್ಕೆ 25 ಮಂದಿಯ ಪೋಟೋ ಇಟ್ಟು ವಾಮಾಚಾರ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ತಾ ಲೂಕಿನ ಪಡಂಗಡಿ ಗ್ರಾಮದ ಬೋಳಿಯಾರ್ ಎಂಬಲ್ಲಿ 25 ಎಕರೆ ಜಾಗವನ್ನು ಕೇರಳ ಮೂಲದ ಗೋಪಾ ಕುಮಾರ್ ಮತ್ತು ಸುಮೇಶ್ ಎಂಬವರು ಕಳೆದ ವರ್ಷ ಮಂಗಳೂರು ವೈಷ್ಣವಿ ಟ್ರಾನ್ಸ್ ಪೋರ್ಟ್ ಮಾಲೀಕ ರಾಜೇಶ್ ಪ್ರಭು ಎಂಬಾತ ಖರೀದಿ ಮಾಡಿಕೊಂಡು ದಾಖಲೆ ಪತ್ರ ವರ್ಗಾವಣೆ ಮಾಡಿಸಿ ಜಾಗದ 8 ಕೋಟಿ ರೂಪಾಯಿ ಹಣ ನೀಡದೆ ಮೋಸ ಮಾಡಿದ್ದ. ಈ ಬಗ್ಗೆ ಹಲವು ಕಾಲದವರೆಗ ಗಲಾಟೆ ನಡೆಯುತ್ತಿತ್ತು. ನಂತರ ಮಾರಾಟ ಮಾಡಿದ ಜಾಗದ ಮಾಲೀಕರಾದ ಗೋಪಾ ಕುಮಾರ್ ಮತ್ತು ಸುಮೇಶ್ ಸೇರಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಈ ಬಗ್ಗೆ ಬೆಳ್ತಂಗಡಿ ಕೋರ್ಟ್ ನಲ್ಲಿ ಹಣ ನೀಡದೆ ಮೋಸ ಮಾಡಿದ ಬಗ್ಗೆ ದಾಖಲೆಗಳ ಮೂಲಕ ತಿಳಿದಿದ್ದು, ಜಾಗವನ್ನು ಮೂರನೇ ವ್ಯಕ್ತಿಗೆ ರಾಜೇಶ್ ಪ್ರಭು ಮಾರಾಟ ಮಾಡಬಾರದು ಮತ್ತು ಹಿಂದಿನ ಮೂಲ ಜಾಗದ ಮಾಲೀಕರಾದ ಗೋಪಾ ಕುಮಾರ್ ಮತ್ತು ಸುಮೇಶ್ ವಶಕ್ಕೆ ಬೆಳ್ತಂಗಡಿ ಕೋರ್ಟ್ ನೀಡಿತ್ತು.

ಇದೀಗ ಜಾಗಕ್ಕೆ ಪ್ರವೇಶ ಮಾಡುವ ಗೇಟಿನ ಮುಂದೆ ಜೂ.9 ರಂದು ರಾತ್ರಿ 25 ಮೇಕೆಯ ತಲೆ ಕಡಿದು ಅದಕ್ಕೆ 25 ಮಂದಿಯ ಫೋಟೋಗಳನ್ನು ಇಟ್ಟು ಜಾಗ ಖರೀದಿ ಮಾಡಿ ಹಣ ಮೋಸ ಮಾಡಿದ್ದ ಮಂಗಳೂರಿನ ವೈಷ್ಣವಿ ಟ್ರಾನ್ಪೋ ರ್ಟ್ ಮಾಲೀಕನಾಗಿರುವ ಪ್ರಭಾವಿ ವ್ಯಕ್ತಿ ರಾಜೇಶ್ ಪ್ರಭು ಎಂಬಾತ ವಾಮಾಚಾರ ಮಾಡಿದ್ದಾನೆ ಎಂದು ಆರೋಪ ಕೇಳಿಬರುತ್ತಿದೆ.

- Advertisement -

Related news

error: Content is protected !!