Sunday, June 29, 2025
spot_imgspot_img
spot_imgspot_img

ಬೆಳ್ತಂಗಡಿ: ಪಾದಚಾರಿ ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ..!

- Advertisement -
- Advertisement -

ಬೆಳ್ತಂಗಡಿ: ಮಹಿಳೆಯೊಬ್ಬರನ್ನು ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಎಳೆದು ಪರಾರಿಯಾದ ಘಟನೆ ಬೆಳ್ತಂಗಡಿಯ ಕೊಲ್ಲೂರಿನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಕೋರಿಯಾರ್ ನಿವಾಸಿ ದಾಮೋಧರ್ ಭಟ್ ಅವರ ಪತ್ನಿ ರಾಜೀವಿ(50) ಎಂಬವರ ಕುತ್ತಿಗೆಯಿಂದ ಆರೋಪಿ ಬೆಳ್ತಂಗಡಿ ತಾಲೂಕಿನ ಕೊಲ್ಲೂರು ಗ್ರಾಮದ ಗಿರಿಗುಡ್ಡೆ ಡೆಂಬುಗ ನಿವಾಸಿ ಕೊರಗಪ್ಪ ಗೌಡರ ಮಗ ಉಮೇಶ್ ಗೌಡ ಕರಿಮಣಿ ಸರ ಎಳೆದು ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಮಹಿಳೆ ಬೆಳ್ತಂಗಡಿಗೆ ಹೋಗಿ ವಾಪಸ್ ಮನೆಗೆ ಕೊಯ್ಯೂರು ಗ್ರಾಮದ ಪಾಂಬೇಲ್ ಕ್ರಾಸ್‌ನಲ್ಲಿ ಇಳಿದು ಕೋರಿಯಾರ್ ಮನೆಗೆ ಮಣ್ಣು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿ ಬಂದು ಮಹಿಳೆಯ ಕುತ್ತಿಗೆಯನ್ನು ಬಿಗಿಯಾಗಿ ಹಿಡಿದು ಬೊಬ್ಬೆ ಹಾಕಬೇಡಿ ಎಂದು ಬೆದರಿಸಿ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರವನ್ನು ಎಳೆದಿದ್ದು ಈ ವೇಳೆ ಕೈಯಲ್ಲಿ ಗಟ್ಟಿಯಾಗಿ ಹಿಡಿದು ಬೊಬ್ಬೆ ಹಾಕಿದಾಗ ಕರಿಮಣಿ ಎಳೆದ ರಭಸಕ್ಕೆ ಕುತ್ತಿಗೆ ಎದೆಗೆ ಗಾಯವಾಗಿದ್ದು ಕರಿಮಣಿ ಎರಡು ತುಂಡಾಗಿದೆ. ಒಂದು ತುಂಡು ಕರಿಮಣಿಯನ್ನು ಆರೋಪಿ ಉಮೇಶ್ ಗೌಡ ಹಿಡಿದು ಗುಡ್ಡದ ಕಡೆ ಓಡಿ ಪರಾರಿಯಾಗಿದ್ದಾನೆ.

ಗಾಯಗೊಂಡ ರಾಜೀವಿ ಮಹಿಳೆ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸುಮಾರು ಒಂದು ಲಕ್ಷ ಮೌಲ್ಯದ 16 ಗ್ರಾಂ ಚಿನ್ನ ಕಳ್ಳತನ ಮಾಡಿರುವ ಬಗ್ಗೆ, ಆರೋಪಿ ಉಮೇಶ್ ಗೌಡ ವಿರುದ್ಧ ಪ್ರಕರಣ ದಾಖಲಾಗಿದ್ದು, ಬೆಳ್ತಂಗಡಿ ಇನ್ಸೆಕ್ಟರ್ ನಾಗೇಶ್ ಕದ್ರಿ ನೇತೃತ್ವದ ವಿಶೇಷ ತಂಡ ಆರೋಪಿ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!