Monday, May 20, 2024
spot_imgspot_img
spot_imgspot_img

ಬೆಳ್ತಂಗಡಿ: ಬಂಗೇರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಹರಿದು ಬಂದ ಜನರು; ಹುಟ್ಟೂರು ಕೇದೆಯಲ್ಲಿ ಅಂತ್ಯಸಂಸ್ಕಾರ…!

- Advertisement -G L Acharya panikkar
- Advertisement -

ಬೆಳ್ತಂಗಡಿ: ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ ನೇರ ನಡೆನುಡಿಯ, ದಿಟ್ಟ ಹೋರಾಟಗಾರ ಮಾಜಿ ಶಾಸಕ ಕೆ. ವಸಂತ ಬಂಗೇರ ಪಾರ್ಥಿವ ಶರೀರದ ಅಂತಿಮ ನಮನ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಸರ್ಕಾರಿ ಇಲಾಖೆಗಳು ಅಧಿಕಾರಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು, ತಾಲೂಕು, ಹೊರ ತಾಲೂಕುಗಳಿಂದ ಆಗಮಿಸಿದ ಗಣ್ಯರು, ಸಾವಿರಾರು ಸಂಖ್ಯೆಯಲ್ಲಿ ನಾಗರಿಕರು, ಬಂಗೇರರ ಅಭಿಮಾನಿಗಳು ಪಕ್ಷ, ಬೇಧ ಮರೆತು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

ನಿನ್ನೆ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಬಂಗೇರ ಅವರ ಮೃತದೇಹವನ್ನು ರಾತ್ರಿ ಬೆಳ್ತಂಗಡಿಯ ಅವರ ಮನೆಗೆ ತರಲಾಯಿತು. ಇಂದು ಅಂತ್ಯ ಸಂಸ್ಕಾರದ ವಿಧಿ-ವಿಧಾನಗಳು ಇಂದು ಬೆಳಿಗ್ಗೆ ಹಳೆಕೋಟೆಯ ಅವರ ಮನೆಯಲ್ಲಿ ಜರುಗಿತು. ಬಳಿಕ ಬೆಳ್ತಂಗಡಿಯ ನಗರದ ಮೂಲಕ ಪಾರ್ಥಿವ ಶರೀರವನ್ನು ತಾಲೂಕು ಕ್ರೀಡಾಂಗಣಕ್ಕೆ ತಂದು, ಅಲ್ಲಿ ಸಾರ್ವಜನಿಕರ ದರ್ಶನಕ್ಕೆ ಮಧ್ಯಾಹ್ನದ ವರೆಗೆ ಅವಕಾಶ ಮಾಡಿ ಕೊಡಲಾಯಿತ್ತು. ಬೆಳ್ತಂಗಡಿ ನಗರದಲ್ಲಿ ವರ್ತಕರು ಅಂಗಡಿ, ಮುಂಗಟ್ಟುಗಳನ್ನು ಬಂದ್‌ ಮಾಡಿ ಮಾಜಿ ಶಾಸಕರಿಗೆ ಗೌರವ ಸಲ್ಲಿಸಿದರು.

ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್, ಮಾಜಿ ಸಚಿವರುಗಳಾದ ಗಂಗಾಧರ ಗೌಡ, ಅಭಯಚಂದ್ರ ಜೈನ್, ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಕೃಷ್ಣ ಪಾಲೇಮಾರ್, ಮಾಜಿ ಶಾಸಕರುಳಾದ ಶಕುಂತಲಾ ಶೆಟ್ಟಿ, ಸಂಜೀವ ಮಂಜೂರು, ರುಕ್ಕಯ ಪೂಜಾರಿ, ಪ್ರಭಾಕರ ಬಂಗೇರ, ದ.ಕ ಜಿಲ್ಲಾಧಿಕಾರಿ ಮುಲೈ ಮುಹಿಲನ್, ಎಸ್.ಪಿ ರೀಷ್ಯಂತ್, ಹಾಗೂ ವಿವಿಧ ಸಂಘ ಸಂಸ್ಥೆಗಳು, ಸಂಘಟನೆಗಳು, ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ನೌಕರರು, ಪೊಲೀಸ್ ಇಲಾಖೆಯ ಮುಖ್ಯಸ್ಥರು, ತಾಲೂಕು, ಹೊರ ತಾಲೂಕುಗಳಿಂದ ಗಣ್ಯರು, ನಾಗರಿಕರು, ಬಂಗೇರ ಅಭಿಮಾನಿಗಳು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸರ್ಕಾರದ ವತಿಯಿಂದ ಹಾಗೂ ಪೊಲೀಸ್ ಇಲಾಖೆಯ ವತಿಯಿಂದ ಗೌರವ ಸಲ್ಲಿಸಲಾಯಿತು. ಬಳಿಕ ತಾಲೂಕು ಕ್ರೀಡಾಂಗಣದಿಂದ ಬೆಳ್ತಂಗಡಿ ನಗರದ ಮೂಲಕ ಹಳೇಕೋಟೆಯ ಅವರ ಮನೆ ತನಕ ಅಂತಿಮ ಯಾತ್ರೆ ನಡೆಯಿತು. ಸಾವಿರಾರು ಮಂದಿ ಪಾಲ್ಗೊಂಡರು

ವಸಂತ ಬಂಗೇರ ಅವರ ಹೂಟ್ಟೂರು ಕುವೆಟ್ಟು ಗ್ರಾಮದ ಕೇದೆಯಲ್ಲಿ ಕುಟುಂಬಸ್ಥರು, ಅಭಿಮಾನಿಗಳು, ಬಂಧು ವರ್ಗದವರ ಉಪಸ್ಥಿತಿಯಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಸಂಜೆ ವೇಳೆ ಅವರ ಹುಟ್ಟೂರು ಕುವೆಟ್ಟು ಗ್ರಾಮದ ಕೇದೆಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ. ಅವರ ಮನೆಗೆ ಶಾಸಕ ಹರೀಶ್ ಪೂಂಜ, ರಕ್ಷಿತ್ ಶಿವರಾಂ, ವಸಂತ ಸಾಲಿಯಾನ್, ಪ್ರಶಾಂತ್ ಪ್ರತಿಮಾನಿಲಯ, ಜಯಂತ ಕೋಟ್ಯಾನ್, ಮುಗುಳಿ ನಾರಾಯಣ ರಾವ್, ಜಯವಿಕ್ರಮ್, ಪದ್ಮನಾಭ ಮಾಣಿಂಜ, ನಿತೀಶ್ ಕೋಟ್ಯಾನ್, ಸಂತೋಷ ಕುಮಾ‌ರ್ ಕಾಪಿನಡ್ಕ ಧರಣೇಂದ್ರ ಕುಮಾ‌ರ್, ಮನೋಹರ ಇಳಂತಿಲ, ಶೇಖರ ಕುಕ್ಕೇಡಿ, ಯೋಗೀಶ್ ಕುಮಾರ್ ನಡಕರ, ಜೈಸನ್, ರಾಜೇಶ್ ಮೂಡುಕೋಡಿ, ಡಾ.ರಾಜರಾಮ್, ಜಗದೀಶ್ ಡಿ. ರಾಜಶೇಖರ ರೈ ಚಿದಾನಂದ ಇಡ್ಯ ಸತೀಶ್ ಕಾಶಿಪಟ್ಟ ರತ್ನಾಕರ ಬುಣ್ಣನ್, ವಸಂತ ಬಿ.ಕೆ, ಜಯಾನಂದ ಲಾಯಿಲ, ಡಾ.ಜಗನ್ನಾಥ್, ಡಾ. ಸುಧೀರ್ ಪ್ರಭು ಸೇರಿದಂತೆ ಗಣ್ಯರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

- Advertisement -

Related news

error: Content is protected !!