Sunday, June 29, 2025
spot_imgspot_img
spot_imgspot_img

ಬೆಳ್ತಂಗಡಿ: ಇಸ್ಪೇಟ್‌ ಅಡ್ಡೆಗೆ ಪೊಲೀಸ್‌ ದಾಳಿ: ಆರೋಪಿಗಳು ಸಹಿತ ನಗದು ಹಾಗೂ ಇನ್ನಿತರ ವಸ್ತುಗಳು ಪೊಲೀಸ್ ವಶ..!

- Advertisement -
- Advertisement -

ಸಾರ್ವಜನಿಕ ಸ್ಥಳದಲ್ಲಿ, ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳಿಂದ ಜುಗಾರಿ ಆಟ ಆಡುತ್ತಿರುವ ವೇಳೆ ಪೊಲೀಸರು ದಾಳಿ ನಡೆಸಿ ಆರೋಪಿಗಳ ಸಹಿತ ನಗದು ಹಾಗೂ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಬೆಳ್ತಂಗಡಿ ಕಸಬಾ ಗ್ರಾಮದ ಸುದೆಮುಗೇರು ಎಂಬಲ್ಲಿ ನಡೆದಿದೆ.

ಬೆಳ್ತಂಗಡಿಯ ಸುದೆಮುಗೇರು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ, ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳಿಂದ ಜುಗಾರಿ ಆಟ ಆಡುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಚಂದ್ರಶೇಖರ್ ಎ. ಎಮ್, ಪೊಲೀಸ್ ಉಪ ನಿರೀಕ್ಷಕರು ಹಾಗೂ ಬೆಳ್ತಂಗಡಿ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಈ ವೇಳೆ ಜುಗಾರಿ ಆಟದಲ್ಲಿ ತೊಡಗಿದ್ದವರು ಪರಾರಿಯಾಗಲು ಯತ್ನಿಸಿದ್ದು, ಅವರನ್ನು ತಡೆದು ಸ್ಥಳವನ್ನು ಪರಿಶೀಲಿಸಿದಾಗ, ಇಸ್ಪೀಟು ಎಲೆಗಳು, ನಗದು ರೂ 11,730/- ಹಾಗೂ ಇತರ ಸೊತ್ತುಗಳು ಪತ್ತೆಯಾಗಿದೆ. ಆರೋಪಿಗಳನ್ನು ಬೆಳ್ತಂಗಡಿ ಕಸಬಾ ಗ್ರಾಮ ನಿವಾಸಿ ಗಣೇಶ್ (62), ಕೊಯ್ಯೂರು ಗ್ರಾಮ, ಬೆಳ್ತಂಗಡಿ ತಾಲೂಕು ದಿನೇಶ ಕೆ (42), ಲಾಯಿಲ ಗ್ರಾಮ ಬೆಳ್ತಂಗಡಿ ಅಜಯ್ (31), ನಡ ಗ್ರಾಮ ಬೆಳ್ತಂಗಡಿ ರವಿ ಪ್ರಕಾಶ (52), ಲಾಯಿಲ ಗ್ರಾಮ ಬೆಳ್ತಂಗಡಿ ಸುಬ್ರಮಣ್ಯ (34) , ಬೆಳ್ತಂಗಡಿ ಕಸಬಾ ಗ್ರಾಮ ಗಂಗಾಧರ್, ಲಾಯಿಲ ಗ್ರಾಮ ಸುಬ್ರಮಣ್ಯ ಎಂದು ಗುರುತಿಸಲಾಗಿದೆ.

ಆರೋಪಿಗಳ ಸಹಿತ ನಗದು ಹಾಗೂ ಇನ್ನಿತರ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ : 68/2024 ಕಲಂ: 87 ಕೆಪಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ

- Advertisement -

Related news

error: Content is protected !!