Sunday, June 29, 2025
spot_imgspot_img
spot_imgspot_img

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ನಾಪತ್ತೆಯಾಗಿರುವ ಬೆಳ್ತಂಗಡಿಯ ನೌಷದ್ ಮನೆ ಮೇಲೆ ಎನ್‌ಐಎ ದಾಳಿ..!

- Advertisement -
- Advertisement -

ಬೆಳ್ಳಾರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಆರೋಪಿ ನೌಷದ್ ಮನೆ ಮೇಲೆ ಎನ್‌ಐಎ ತಂಡ ಇಂದು ಮುಂಜಾನೆ ದಾಳಿ ನಡೆಸಿದೆ.

ಬೆಂಗಳೂರಿನಿಂದ ಆಗಮಿಸಿದ 5 ಜನರ ಎನ್‌ಐಎ ತಂಡ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷದ್ (27) ಮನೆಗೆ ಇಂದು ಮುಂಜಾನೆ 5.30 ರ ಸುಮಾರಿಗೆ ದಾಳಿ ಮಾಡಿದ್ದು, ಪರಿಶೀಲನೆ ನಡೆಸುತ್ತಿದೆ.

ನೌಷದ್ ಪತ್ತೆಗಾಗಿ ಎನ್‌ಐಎ 2 ಲಕ್ಷ ರೂ. ಬಹುಮಾನ ಘೋಷಿಸಿತ್ತು. ಎನ್‌ಐಎ ಅಧಿಕಾರಿಗಳಿಗೆ ಬೆಳ್ತಂಗಡಿ ಪೊಲೀಸರು ಸಾಥ್ ನೀಡಿದ್ದಾರೆ. ಇನ್ನು ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯದ 16 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

- Advertisement -

Related news

error: Content is protected !!