Tuesday, May 14, 2024
spot_imgspot_img
spot_imgspot_img

ಮಂಗಳೂರು: ಗರ್ಭಿಣಿ ಮಹಿಳೆಗೆ ಆಸರೆಯಾದ ಪೊಲೀಸರು!

- Advertisement -G L Acharya panikkar
- Advertisement -

ಮಂಗಳೂರು: ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರನ್ನು ಪೊಲೀಸರು ತಮ್ಮ ವಾಹನದಲ್ಲೇ ಕರೆದುಕೊಂಡು ಹೋಗಿ ಆಕೆಯ ನೋವಿಗೆ ಸ್ಪಂದಿಸಿ ಮಾನವೀಯತೆ ಮೆರೆದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿಯ ಗುರುವಾಯನಕೆರೆಯ ನಿವಾಸಿಗಳಾದ ಸಿದ್ದಿಕ್ ಇವರ ಪತ್ನಿ ಶಹೀದಾ ಬಾನುರವರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಅರ್ಕುಲ ಎಂಬಲ್ಲಿ ವಾಹನ ಕೆಟ್ಟುಹೋಗಿದೆ. ಈ ಸಂದರ್ಭದಲ್ಲಿ ಅಲ್ಲೇ ಇದ್ದ ಮಂಗಳೂರಿನ ಪೊಲೀಸರು ಎ ಎಸ್ ಐ ಹರೀಶ್ ಹಾಗೂ ಸಿಪಿಸಿ ವಿಜಯ್ ಕುಮಾರ್ ಸ್ವತಃ ಅವರ ಪೋಲಿಸ್ ವಾಹನದಲ್ಲಿ ಎ.ಜೆ.ಆಸ್ಪತ್ರೆಗೆಗೆ ಕರೆದುಕೊಂಡು ಹೋಗುವ ಮೂಲಕ ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ.

ಇದೀಗ ಪೊಲೀಸರು ಈ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

- Advertisement -

Related news

error: Content is protected !!