Saturday, April 27, 2024
spot_imgspot_img
spot_imgspot_img

ಬೆಳ್ತಂಗಡಿ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು; ದೂರು ದಾಖಲು..!

- Advertisement -G L Acharya panikkar
- Advertisement -

ಬೆಳ್ತಂಗಡಿ: ತೋಟದಲ್ಲಿ ಮೇಯಲು ಕಟ್ಟಿ ಹಾಕಿದ್ದ ದನ ಕಳವುಗೊಂಡಿರುವ ಘಟನೆ ಬೆಳ್ತಂಗಡಿ ತಾಲೂಕೂ ಕೊಕ್ಕಡ ಗ್ರಾಮದ ಶಬರಾಡಿ ಎಂಬಲ್ಲಿ ನಡೆದಿದೆ.

ಕಳವಾದ ದನ ಕೊಕ್ಕಡ ಗ್ರಾಮ, ಬೆಳ್ತಂಗಡಿ ನಿವಾಸಿ ಶಿವಪ್ರಸಾದ್‌ ಎನ್ನಲಾಗಿದೆ.

ಬೆಳ್ತಂಗಡಿ ನಿವಾಸಿ ಶಿವಪ್ರಸಾದ್ ಎಂಬವರು ಮಾ. 25ರಂದು ಬೆಳಿಗ್ಗೆ ತನ್ನ ದನವನ್ನು ತನ್ನ ತೋಟದಲ್ಲಿ ಮೇಯಲೆಂದು ಕಟ್ಟಿ ಹಾಕಿದ್ದು, ಬಳಿಕ ಮದ್ಯಾಹ್ನ ತೋಟಕ್ಕೆ ಬಂದು ನೋಡುವಾಗ ದನವು ಕಟ್ಟಿ ಹಾಕಿದ್ದಲ್ಲಿ ಕಂಡು ಬಂದಿರುವುದಿಲ್ಲ. ಈ ಬಗ್ಗೆ ಎಲ್ಲಾ ಕಡೆ ಹುಡುಕಾಡಿದರೂ ದನವು ಎಲ್ಲೂ ಪತ್ತೆಯಾಗಿರುವುದಿಲ್ಲ. ಕಳವಾದ ದನದ ಮೌಲ್ಯ ರೂ 20,000 ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಶಿವಪ್ರಸಾದ್ ಅವರು ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 21/2024 ಕಲಂ: 379 IPC ಯಂತೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

- Advertisement -

Related news

error: Content is protected !!