Thursday, July 4, 2024
spot_imgspot_img
spot_imgspot_img

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆಗೆ ಶರಣು..!

- Advertisement -G L Acharya panikkar
- Advertisement -

ಬೆಳ್ತಂಗಡಿ: ಮಹಿಳೆಯೋರ್ವಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಧರ್ಮಸ್ಥಳದ ಜೋಡುಸ್ಥಾನದಲ್ಲಿನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್ (26) ಎಂದು ಗುರುತಿಸಲಾಗಿದೆ.

ರಕ್ಷಿತಾ ಜೈನ್ ರವರು ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ರಕ್ಷಿತಾ ಅವರ ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಮೃತರು ತಂದೆ ವೀರಚಂದ್ರ ಜೈನ್, ತಾಯಿ ಅರುಣಾ, ಪತಿ ಸಂತೋಷ್ ಜೈನ್ ಹಾಗೂ 2 ವರ್ಷದ ಹೆಣ್ಣು ಮಗುವನ್ನು ಅಗಲಿರುತ್ತಾರೆ.

- Advertisement -

Related news

error: Content is protected !!