- Advertisement -
- Advertisement -





ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ.ಮೌಲ್ಯದ ನಗ-ನಗದು ಕಳವು ಮಾಡಿದ ಘಟನೆ ಬೆಳ್ತಂಗಡಿ ಮಾಲಾಡಿ ಗ್ರಾಮ ಕೊಲ್ಪೆದಬೈಲು ಎಂಬಲ್ಲಿ ನಡೆದಿದೆ.
ವಸಂತಿ ಹೆಗ್ಡೆಎಂಬವರು ಅವರ ಮಗ ಹಾಗೂ ಸೊಸೆ ಏ.20ರಂದು ಮಧ್ಯಾಹ್ನ ಮನೆಯಿಂದ ಬೆಳ್ತಂಗಡಿಗೆ ಹೋಗಿದ್ದು ಸಂಜೆ ವಾಪಾಸು ಮನೆಗೆ ಬಂದು ನೋಡಿದಾಗ, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ಮನೆಯ ಮುಂದಿನ ಬಾಗಿಲಿಗೆ ಹಾಕಿರುವ ಬೀಗದ ಕೊಂಡಿಯನ್ನು ಮುರಿದು ಮನೆಯೊಳಗೆ ಪ್ರವೇಶಿಸಿ ಕೋಣೆಯ ಕಪಾಟುಗಳಲ್ಲಿದ್ದ ಚಿನ್ನಾಭರಣಗಳನ್ನು ಹಾಗೂ ನಗದು ರೂ 30,000/- ಹಣವನ್ನು ಯಾರೋ ಕಳ್ಳರು ಕಳವು ಮಾಡಿರುತ್ತಾರೆ.
ಕಳವಾದ ಚಿನ್ನಾಭರಣಗಳ ಒಟ್ಟು ತೂಕ 160.5 ಗ್ರಾಂ ಆಗಿದ್ದು ಇದರ ಮೌಲ್ಯ ರೂ 13,72,000/- ಆಗಿರುತ್ತದೆ. ನಗದು ಸೇರಿ ಕಳವಾದ ಚಿನ್ನಾಭರಣಗಳ ಒಟ್ಟು ಮೌಲ್ಯ ರೂ 14,02,000/- ಆಗಿರುತ್ತದೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣಾ ಅ.ಕ್ರ 25/2025 ಕಲಂ: 331(3), 305 BNS- 2023 ಯಂತೆ ಪ್ರಕರಣ ದಾಖಲಾಗಿರುತ್ತದೆ.
- Advertisement -