Monday, April 29, 2024
spot_imgspot_img
spot_imgspot_img

ಬೆಳ್ತಂಗಡಿ: ಕಾರು-ಬೈಕ್ ಢಿಕ್ಕಿ; ಸವಾರ ಮೃತ್ಯು

- Advertisement -G L Acharya panikkar
- Advertisement -

ಬೆಳ್ತಂಗಡಿ: ಇನೋವಾ ಕಾರು ಮತ್ತು ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ಕಾಪಿನಡ್ಕದಲ್ಲಿ ನಡೆದಿದೆ. ಮೃತರನ್ನು ಕಾರ್ಕಳ ತಾಲೂಕಿನ ಈದು ಗ್ರಾಮದ ಸುಧೀರ್‌ ಎಂದು ಗುರುತಿಸಲಾಗಿದೆ.

ಬೆಳ್ತಂಗಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಇನೋವಾ ಕಾರು ಹಾಗೂ ಅಳದಂಗಡಿ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್‌ ನಡುವೆ ಢಿಕ್ಕಿ ಸಂಭವಿಸಿದ್ದು, ಢಿಕ್ಕಿ ರಭಸಕ್ಕೆ ಬೈಕ್‌ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ತಕ್ಷಣ ಬೈಕ್‌ ಸವಾರನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.

- Advertisement -

Related news

error: Content is protected !!