Sunday, July 19, 2026
spot_imgspot_img
spot_imgspot_img

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರ್‍ ಡಿಕ್ಕಿ-ಇಬ್ಬರಿಗೆ ಗಾಯ

- Advertisement -
- Advertisement -

ಬೆಳ್ತಂಗಡಿ: ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಇಬ್ಬರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ರಾಷ್ಟ್ರೀಯ ಹೆದ್ದಾರಿಯ ಕಾಪುವಿನಲ್ಲಿ ಮಂಗಳವಾರ ನಡೆದಿದೆ.

ಗಾಯಾಳುಗಳನ್ನು ತಿಪಟೂರಿನ ಶ್ರೀನಿವಾಸ (53) ಮತ್ತು ಷಣ್ಮುಖ (46) ಎಂದು ಗುರುತಿಸಲಾಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಕಕ್ಕಿಂಜೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವರದಿಗಳ ಪ್ರಕಾರ, ಕಾರು ತಿಪಟೂರಿನಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿತ್ತು. ಮಂಗಳವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಮುಂಡಾಜೆ ಗ್ರಾಮದ ಕಾಪು ತಲುಪಿದಾಗ, ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯಿಂದ ಹೊರಕ್ಕೆ ಉರುಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಂತರ ಮಗುಚಿ ಬಿದ್ದಿದೆ ಎನ್ನಲಾಗಿದೆ.

ಅಪಘಾತದಲ್ಲಿ ಕಾರು ತೀವ್ರವಾಗಿ ಹಾನಿಗೊಳಗಾಗಿದ್ದು, ವಾಹನದ ಒಂದು ಭಾಗಕ್ಕೆ ತೀವ್ರ ಹಾನಿಯಾಗಿದೆ ಎಂದು ವರದಿಯಿಂದ ತಿಳಿದುಬಂದಿದೆ.

- Advertisement -

Related news

error: Content is protected !!