Friday, June 19, 2026
spot_imgspot_img
spot_imgspot_img

ಬೆಳ್ತಂಗಡಿ: ಯೂಟ್ಯೂಬ್‌ನಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪ; ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಸಂಬಂಧಿಸಿ ನೀಡಿರುವ ಹೇಳಿಕೆ ವಿಚಾರವಾಗಿ ಸೌಜನ್ಯಾ ಪರ ಹೋರಾಟಗಾರ ಜಯಂತ್ ಟಿ. ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದೆ.

ಜಯಂತ್ ಟಿ ರವರು ಯೂಟ್ಯೂಬ್‌ನಲ್ಲಿ ಸತ್ಯಾಸತ್ಯತೆಯನ್ನು ತಿಳಿದಿದ್ದರು ಸಹ ಅಪೂರ್ಣವಾದ ಮಾಹಿತಿಯೊಂದಿಗೆ ಪೊಲೀಸ್ ಉಪಾಧಿಕ್ಷಕರು ಬಂಟ್ವಾಳ ರವರು ನಿಯಮನುಸಾರ ಕಾನೂನಾತ್ಮಕವಾಗಿ ಮಹೇಶ್ ಶೆಟ್ಟಿ ತಿಮರೋಡಿಯವರ ವಿರುದ್ಧ ಮಾನ್ಯ ಸಹಾಯಕ ಆಯುಕ್ತರು ಪುತ್ತೂರುರವರಿಗೆ ಗಡಿಪಾರು ಪ್ರಸ್ತಾವನೆಯನ್ನು ಸಲ್ಲಿಸಿರುವುದನ್ನು ಸೌಜನ್ಯ ಪರ ಹೋರಾಟಕ್ಕೆ ತೊಂದರೆ ಮಾಡುತ್ತಿದ್ದಾರೆ ಎಂಬಂತೆ ಬಿಂಬಿಸಿ ಸಂಬಂಧ ಕಲ್ಪಿಸಿ, ಇದೊಂದು ಷಡ್ಯಂತ್ರ ಎಂದು ಯೂಟ್ಯೂಬ್‌ನಲ್ಲಿ ಸುಳ್ಳು ಸುದ್ದಿಯನ್ನು ಹರಿಬಿಟ್ಟಿದ್ದರು.

ಈ ಬಗ್ಗೆ ದಿನಾಂಕ 14/10/2025 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 118/2025 ಕಲಂ: 353(1)(b) ಬಿಎನ್ ಎಸ್ ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!