Thursday, April 18, 2024
spot_imgspot_img
spot_imgspot_img

ಬೆಳ್ತಂಗಡಿ: ವಿದ್ಯುತ್ ಕೆಲಸ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕ ದಾರುಣ ಮೃತ್ಯು!

- Advertisement -G L Acharya panikkar
- Advertisement -

ಬೆಳ್ತಂಗಡಿ: ಮನೆಯಲ್ಲಿ ವಿದ್ಯುತ್ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಾನರ್ಪ ಕೌಡಂಗೆ ಎಂಬಲ್ಲಿ ನಡೆದಿದೆ. ಕೌಡಂಗೆ ನಿವಾಸಿ ಅವಿನಾಶ್(23) ಮೃತ ದುರ್ದೈವಿಯಾಗಿದ್ದಾರೆ.

ಮನೆಯಲ್ಲಿ ವಿದ್ಯುತ್ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಅವಘಡ ಸಂಭವಿಸಿದೆ. ತಕ್ಷಣ ಮನೆಮಂದಿ ಯುವಕನನ್ನು ಆಸ್ಪತ್ರೆಗೆಂದು ಕರೆದೊಯ್ದಿದ್ದಾರೆ. ಆದರೆ, ದಾರಿ ಮಧ್ಯೆ ಯುವಕ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ.

ಕೌಡಂಗೆ ನಿವಾಸಿ ಕೃಷಿಕ ಚನನ ಗೌಡ ಮತ್ತು ದೇವಕಿ ದಂಪತಿಯ ಪುತ್ರ ಅವಿನಾಶ್ ಮೇಸ್ತ್ರಿ ಕೆಲಸದ ಜೊತೆಗೆ ಎಲೆಕ್ಟ್ರೀಷಿಯನ್ ಸಹಾಯಕರಾಗಿ ಕೂಡಾ ಕೆಲಸ ಮಾಡುತ್ತಿದ್ದರು.

- Advertisement -

Related news

error: Content is protected !!