- Advertisement -
- Advertisement -
ಬೆಳ್ತಂಗಡಿ: ನದಿ ದಾಟುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದಲ್ಲಿ ನಡೆದಿದೆ. ಮೃತರು ಮಲವಂತಿಗೆ ಗ್ರಾಮದ ಹಿರಿಮಾರು ನಿವಾಸಿ ಗಣೇಶ್ ಗೌಡ (40) ಎನ್ನಲಾಗಿದೆ.
ನಿನ್ನೆ ಸಂಜೆ ವೇಳೆ ಗಣೇಶ್ ರವರು ತಮ್ಮ ತೋಟದಲ್ಲಿ ಅಡಿಕೆ ಸಂಗ್ರಹಿಸಿ ನಂತರ ಮನೆಗೆ ಮರಳಲು ಮಲ್ಲಕಜ ಬಳಿ ಹಳ್ಳ ದಾಟುವ ಸಂದರ್ಭದಲ್ಲಿ ಆಕಸ್ಮಿಕವಾಗಿ ನದಿಗೆ ಜಾರಿ ಬಿದ್ದಿದ್ದರು. ಸ್ಥಳೀಯರು ಅವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸಿದ್ದರು. ತುಸು ದೂರದ ಬಂಡೆ ಕಲ್ಲಿನ ಸಂದಿನಲ್ಲಿ ಸಿಲುಕಿದ್ದ ಅವರನ್ನು ನೀರಿನಿಂದ ಮೇಲಕ್ಕೆತ್ತಲಾಯಿತಾದರೂ, ಅದಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
- Advertisement -