Wednesday, July 22, 2026
spot_imgspot_img
spot_imgspot_img

ಬೆಳ್ತಂಗಡಿ : ಅಕ್ರಮ ಮರಳು ಸಾಗಾಟ- ಪೊಲೀಸ್ ದಾಳಿ!

- Advertisement -
- Advertisement -

ಬೆಳ್ತಂಗಡಿ: ಅಕ್ರಮವಾಗಿ ಸರಕಾರಕ್ಕೆ ರಾಜಧನ ಕಟ್ಟದೆ ನದಿಯ ಬದಿಯಿಂದ ಹಿಟಾಚಿ ಬಳಸಿ ಮರಳು ತೆಗೆಯುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ತಂಗಡಿ ಪೊಲೀಸರು ಜ.8 ರಂದು ಬೆಳಗ್ಗೆ ಖಚಿತ ಮಾಹಿತಿ ಮೇರೆಗೆ ಕಡಿರುದ್ಯಾವರ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ದಾಳಿ ಮಾಡಿದಾಗ ನೇತ್ರಾವತಿ ನದಿ ಕಿನಾರೆಯಿಂದ ಮರಳು ಕಳ್ಳತನ ಮಾಡಿ ಹಿಚಾಚಿ ಮುಖಾಂತರ ಟಿಪ್ಪರ್ ಲಾರಿಗೆ ತುಂಬಿಸಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಪೊಲೀಸರ ದಾಳಿ ಸಂದರ್ಭ ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಲಾರಿ ಬಿಟ್ಟು ಓಡಿ ಪರಾರಿಯಾಗಿದ್ದು, ಹಿಟಾಚಿ ಅಪರೇಟರ್ ನನ್ನು ವಿಚಾರಿಸಿದಾಗ ತನ್ನ ಹೆಸರು ಚಾರ್ಮಡಿಯ ಮಹಮ್ಮದ್ ಶಮೀರುದ್ದಿನ್ ಎಂಬುದಾಗಿ ಹಾಗೂ ಓಡಿ ಹೋದ ಟಿಪ್ಪರ್ ಚಾಲಕ ನ ಹೆಸರು ಚಾರ್ಮಾಡಿಯ ಹೆಚ್.ಹನೀಫ್ ಎಂಬುದಾಗಿ ತಿಳಿಸಿದ್ದಾನೆ.

ಪೊಲೀಸರಿಗೆ ತಿಳಿಯದಂತೆ ಹಲವು ಸಮಯಗಳಿಂದ ಕದ್ದುಮುಚ್ಚಿ ಆರೋಪಿ ಇದೇ ಸ್ಥಳದಿಂದ ಸರಕಾರದ ಬೊಕ್ಕಸಕ್ಕೆ ವಂಚನೆ ಮಾಡಿ ಮರಳು ಕಳ್ಳತನ ಮಾಡುತ್ತಿರುವುದು ತನಿಖೆ ವೇಳೆ ತಿಳಿದು ಬಂದಿದೆ. ಅಕ್ರಮವಾಗಿ ಮರಳು ತುಂಬಿದ್ದ 3,50,000 ಮೌಲ್ಯದ ಟಿಪ್ಪರ್ ಮತ್ತು 2,50,000 ರೂ. ಮೌಲ್ಯದ ಹಿಟಾಚಿ ವಾಹನ ವಶಪಡಿಸಿಕೊಂಡಿದ್ದು, ಆರೋಪಿಗಳ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!