Sunday, June 29, 2025
spot_imgspot_img
spot_imgspot_img

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದ ಕಾರು!

- Advertisement -
- Advertisement -
driving

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಕಾಶಿಬೆಟ್ಟು, ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.

ಮಂಗಳೂರಿನಿಂದ ಚಿಕ್ಕಮಗಳೂರಿನ ಕಡೆಗೆ ತೆರಳುತಿದ್ದ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಉರುಳಿಬಿದ್ದಿದೆ. ರಸ್ತೆ ಬದಿಯ ಹುಲ್ಲು ಸ್ವಚ್ಛಗೊಳಿಸಿ ಮಣ್ಣು ಹಾಕಲಾಗಿದ್ದು ಮಳೆ ಬರುತ್ತಿದ್ದರಿಂದ ಮಣ್ಣಿನಲ್ಲಿ ಕಾರು ಜಾರಿಕೊಂಡು ಹೋಗಿ ಈ ಅವಘಡ ಸಂಭವಿಸಿರಬಹುದು ಎನ್ನಲಾಗಿದೆ.

ಇದನ್ನೂ ಓದಿ: ಶ್ರಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.)ವಿಟ್ಲ ಇದರ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪೌಷ್ಠಿಕ ಆಹಾರ ಮೇಳ ಕಾರ್ಯಕ್ರಮ

ಅಪಘಾತ ಸಂಭವಿಸಿದ ಸಮಯದಲ್ಲಿ ರಿಕ್ಷಾ ಚಾಲಕರೊಬ್ಬರು ಕಾರಿನಲ್ಲಿದ್ದ ವ್ಯಕ್ತಿಯನ್ನು ತನ್ನ ರಿಕ್ಷಾದ ಮೂಲಕ ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಕಾರಿನಲ್ಲಿ ಒಬ್ಬರೇ ಇದ್ದು ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!