Saturday, April 27, 2024
spot_imgspot_img
spot_imgspot_img

ಬೆಳ್ತಂಗಡಿ: ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಭಾವಚಿತ್ರ ದುರ್ಬಳಕೆ!

- Advertisement -G L Acharya panikkar
- Advertisement -

ಬೆಳ್ತಂಗಡಿ: ಹಿಂದೂ ಮುಖಂಡ, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಅವರ ಭಾವಚಿತ್ರವನ್ನು ದುರ್ಬಳಕೆ ಮಾಡಿಕೊಂಡಿರುವ ಕಿಡಿಗೇಡಿಯ ವಿರುದ್ಧ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯು ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಮಹೇಶ್ ಶೆಟ್ಟಿ ತಿಮರೋಡಿ ಅವರು ರಾಷ್ಟ್ರೀಯ ಹಿಂದು ಜಾಗರಣ ವೇದಿಕೆಯ ಸಂಸ್ಥಾಪಕರಾಗಿದ್ದಾರೆ. ಆದರೆ ಯಾರೋ ಕಿಡಿಗೇಡಿಗಳು ಅವರ ಹೆಸರನ್ನು ಹಾಳು ಮಾಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಅವರ ಭಾವ ಚಿತ್ರವನ್ನು ಬಳಸಿ, ನಕಲಿ ಖಾತೆ ತೆರೆದಿದ್ದಲ್ಲದೇ ಅದೇ ಖಾತೆಯಿಂದ ಅವಹೇಳನಕಾರಿ ಸಂದೇಶಗಳನ್ನು ರವಾನಿಸುತ್ತಿದ್ದು ಹಾಗೂ ಪ್ರಚೋದನಕಾರಿ ರೀತಿಯಲ್ಲಿ ಸಂದೇಶಗಳನ್ನು ಹರಿಬಿಡುತ್ತಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯು ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ಧ ಅವಹೇಳನಕಾರಿ ಕೃತ್ಯ ಎಸಗಿದ ಕಿಡಿಗೇಡಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಗ್ಗೆ ಗಮನ ಹರಿಸುವಂತೆ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಲಾಗಿದೆ.

ಈ ವೇಳೆ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ನಂದಕುಮಾರ್, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷರಾದ ಹರೀಶ್ ಕುಮಾರ್ ಬರಮೇಲು, ತಾಲ್ಲೂಕು ಅಧ್ಯಕ್ಷರಾದ ಅನಿಲ್ ಕುಮಾರ್‌ ಅಂತರ, ತಾಲೂಕು ಸಂಚಾಲಕ ಮನೋಜ್ ಕುಮಾರ್ ಕುಂಜರ್ಪ, ತಾಲೂಕು ಕಾರ್ಯದರ್ಶಿ ಸಂದೀಪ್ ಶೆಟ್ಟಿ, ತಾಲ್ಲೂಕು ಜಾಲತಾಣ ಸಂಚಾಲಕ ಪ್ರಜ್ವಲ್ ಗೌಡ ಕೆ.ವಿ ಹಾಗೂ ಗಣೇಶ್ ಶೆಟ್ಟಿ ಕುಂಟಿನಿ ಉಪಸ್ಥಿತರಿದರು.

- Advertisement -

Related news

error: Content is protected !!