Wednesday, July 29, 2026
spot_imgspot_img
spot_imgspot_img

ಬೆಳ್ತಂಗಡಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ: ವೈಯಕ್ತಿಕ ಕಾರಣಗಳಿಂದ ವ್ಯಕ್ತಿಯೊಬ್ಬರು ಮನೆಯ ಕೊಟ್ಟಿಗೆಯ ಪಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರೋಡಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಕಂಬಳದಡ್ಕ ನಿವಾಸಿ ಗೋಪಾಲ ಪೂಜಾರಿ ಮಗ ಅಶೋಕ್(54) ಎಂದು ಗುರುತಿಸಲಾಗಿದೆ.

ಅಶೋಕ್ ಯಾವುದೋ ಕಾರಣದಿಂದ ನೊಂದು ನ.30 ರಂದು ಬೆಳಗ್ಗೆ 11:30 ರಿಂದ 2 ಗಂಟೆ ಅವಧಿಯಲ್ಲಿ ಕಂಬಳದಡ್ಕ ಮನೆಯ ಪಕ್ಕದ ಕೊಟ್ಟಿಗೆಯ ಪಕಾಸಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮೃತ ಅಶೋಕ್‌ರವರ ತಂದೆ ಗೋಪಾಲ ಪೂಜಾರಿ ವೇಣೂರು ಪೊಲೀಸ್ ಠಾಣೆಗೆ ನ.30 ರಂದು ದೂರು ನೀಡಿದ್ದಾರೆ. ಅದರಂತೆ ವೇಣೂರು ಪೊಲೀಸರು ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!