Sunday, May 5, 2024
spot_imgspot_img
spot_imgspot_img

ಬೆಳ್ತಂಗಡಿ: ಹೆಂಡತಿಯೊಂದಿಗೆ ಮನಸ್ತಾಪ; ನಾದಿನಿಯೊಂದಿಗೆ ಪರಾರಿಯಾದ ನವವಿವಾಹಿತ!

- Advertisement -G L Acharya panikkar
- Advertisement -

ಬೆಳ್ತಂಗಡಿ: ಹೆಂಡತಿಯನ್ನು ಬಿಟ್ಟು ನಾದಿನಿಯೊಂದಿಗೆ ಪರಾರಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಗ್ರಾಮದ ಕೈಕಂಬ ಎಂಬಲ್ಲಿ ನಡೆದಿದೆ.

ಮುಹಮ್ಮದ್ ಅವರ ಪುತ್ರಿ ಸೌಧಾ ಎಂಬಾಕೆಯನ್ನು 9 ತಿಂಗಳ ಹಿಂದೆ ಮುಸ್ತಫಾ ಎಂಬಾತನಿಗೆ ಮದುವೆ ಮಾಡಿಕೊಡಲಾಗಿದ್ದು, ಆಗಾಗ ಮಗಳು ಹಾಗೂ ಅಳಿಯ ಮಾವನ ಮನೆಗೆ ಬಂದು ಹೋಗುತ್ತಿದ್ದರು. ಈ ವೇಳೆ ನಾದಿನಿ ರೈಹಾನಳ ಜೊತೆಗೆ ಅಳಿಯ ಮುಸ್ತಫಾ ಸಲುಗೆಯಿಂದ ಇದ್ದುದ್ದಲ್ಲದೇ ಪೋನ್ ಮುಖಾಂತರ ಕೂಡ ಮಾತನಾಡುತ್ತಿದ್ದರು ಎನ್ನಲಾಗಿದೆ.

ಇತ್ತೀಚಿಗೆ ದಂಪತಿಗಳ ನಡುವೆ ಮನಸ್ತಾಪ ಉಂಟಾಗಿ ಸೌಧಾ ತನ್ನ ತವರು ಮನೆಯಲ್ಲಿಯೇ ಇದ್ದಳು. ಜು.8 ರಂದು ಬೆಳಿಗ್ಗೆ ಸುಮಾರು 6-45 ಗಂಟೆಗೆ ಮುಸ್ತಫಾ ಹಾಗೂ ಅವನ ತಾಯಿ ಕಾರಿನಲ್ಲಿ ಕನ್ಯಾಡಿಯ ಕೈಕಂಬದಲ್ಲಿರುವ ಮಾವನ ಮನೆಗೆ ಬಂದಿದ್ದರು ಈ ವೇಳೆ ನಾದಿನಿ ರೈಹಾನಳು ಮನೆಯಲ್ಲಿ ಯಾರಿಗೂ ಹೇಳದೇ ಬ್ಯಾಗೊಂದನ್ನು ಹಿಡಿದುಕೊಂಡು ಬಾವನ ಜೊತೆ ಕಾರುಹತ್ತಿ ಹೋಗಿದ್ದು, ಈ ಘಟನೆಯ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಆರಂಭವಾಗಿದೆ.

- Advertisement -

Related news

error: Content is protected !!