- Advertisement -
- Advertisement -





ಬೆಳ್ತಂಗಡಿ : ಯೂಟ್ಯೂಬರ್ ಸಮೀರ್.ಎಂ.ಡಿ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ನಾಗೇಶ್ ಕದ್ರಿ ಮತ್ತು ತಂಡ ಎಫ್.ಎಸ್.ಎಲ್ ವಿಭಾಗದ ಸೋಕೊ ಸಿಬ್ಬಂದಿ ಜೊತೆಗೆ ಸೆ.4 ರಂದು ಮಧ್ಯಾಹ್ನ ಬೆಂಗಳೂರಿನ ಬನ್ನೇರುಘಟ್ಟದ ಹುಳ್ಳಹಲ್ಲಿಯಲ್ಲಿರುವ ಬಾಡಿಗೆ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ ನ್ಯಾಯಾಲಯದಿಂದ ಸೆ.3 ರಂದು ಸರ್ಚ್ ವಾರಂಟ್ ಪಡೆದುಕೊಂಡು ಪೊಲೀಸರು ಬೆಂಗಳೂರಿಗೆ ತೆರಳಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಮನೆಯಿಂದ ವಿಡಿಯೋ ಮಾಡಲು ಬಳಸಿದ ಕಂಪ್ಯೂಟರ್ ಮತ್ತು ಮೊಬೈಲ್ ಫೋನ್ ಜಪ್ತಿ ಮಾಡಿ ತನಿಖೆ ನಡೆಸಲಿರುವುದಾಗಿ ತಿಳಿದುಬಂದಿದೆ.
- Advertisement -








