![G L Acharya G L Acharya](https://vtvvitla.com/wp-content/uploads/2023/07/gl_acharya.jpeg)
![panikkar panikkar](https://vtvvitla.com/wp-content/uploads/2020/07/panikkar.jpeg)
![vtv vitla](https://vtvvitla.com/wp-content/uploads/2021/11/VidyamaathaAds-1024x1024.jpg)
![vtv vitla](https://vtvvitla.com/wp-content/uploads/2021/10/Drving-ad-1024x606.jpg)
![vtv vitla](https://vtvvitla.com/wp-content/uploads/2021/02/WhatsApp-Image-2021-02-06-at-5.50.17-PM-1024x640.jpeg)
ಬೆಳ್ತಂಗಡಿ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಸಮೀಪ ಆಕ್ಟಿವಾ ಮತ್ತು ಲಾರಿ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ದ್ವಿ ಚಕ್ರವ ವಾಹನದ ಮುಂಭಾಗ ಸಂಪೂರ್ಣವಾಗಿ ನುಜ್ಜು ಗುಜ್ಜಾಗಿದ್ದು, ಆಕ್ಟಿವಾ ಸವಾರ ಕಲ್ಮಂಜ ನಿವಾಸಿ ರಾಜೇಶ್ ಎಂಬವರ ಕಾಲಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ದ್ವಿಚಕ್ರ ವಾಹನ ಸವಾಋ ಕಲ್ಮಂಜದಿ0ದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಉಜಿರೆಯಿಂದ ಕಕ್ಕಿಂಜೆ ಕಡೆಗೆ ಸಂಚರಿಸುತ್ತಿದ್ದ ಲಾರಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಬಳಿ ಪರಸ್ಪರ ಡಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಗೆಸೆಯಲ್ಪಟ್ಟ ಆಕ್ಟಿವಾ ಸವಾರನ ಕಾಲಿಗೆ ಬಲವಾದ ಏಟು ತಗುಲಿದೆ. ಕೂಡಲೇ ಸ್ಥಳೀಯರ ಸಹಕಾರದಿಂದ ಗಾಯಾಳುವನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕತ್ಸೆ ಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
![](https://vtvvitla.com/wp-content/uploads/2021/10/indane-gas-1024x606.jpg)
![](https://vtvvitla.com/wp-content/uploads/2021/10/Ayodhya-Mens-819x1024.jpg)
![vtv vitla](https://vtvvitla.com/wp-content/uploads/2021/12/newspaper-1024x512.jpg)