Tuesday, April 23, 2024
spot_imgspot_img
spot_imgspot_img

ವರದಕ್ಷಿಣೆ ತರಲಿಲ್ಲವೆಂದು ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಪತಿ ಮಹಾಶಯ

- Advertisement -G L Acharya panikkar
- Advertisement -

ಬೆಂಗಳೂರು: ವರದಕ್ಷಿಣೆ ತರಲಿಲ್ಲವೆಂದು ಪತಿ ಮಹಾಶಯನೊಬ್ಬ ತನ್ನ ಪತ್ನಿಯ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ.


ಗಂಭೀರ ಸ್ಥಿತಿಯಲ್ಲಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಸಿ ಪಾಳ್ಯದ ನಿವಾಸಿ ಸೂರಜ್ ಸಿಂಗ್ ಬೆಂಕಿ ಹಚ್ಚಿದ ಆರೋಪಿ. ಮದುವೆಯಾದಾಗಿನಿಂದಲೂ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಸೂರಜ್ ಸಿಂಗ್ ಪತ್ನಿಯ ತವರು ಮನೆಯಿಂದ ಆಗಾಗ ಹಣ ಪಡೆದುಕೊಳ್ಳುತ್ತಿದ್ದ.


ಮತ್ತೆ ಮತ್ತೆ ಹಣಕ್ಕಾಗಿ ಗಲಾಟೆ ಮಾಡುತ್ತಿದ್ದ. ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿಯ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!