- Advertisement -
- Advertisement -
ಬೆಂಗಳೂರು: ನಗರದಲ್ಲಿ NINNE ಸಂಜೆಯಿಂದ ವರುಣನ ಆರ್ಭಟ ಜೋರಾಗಿದೆ. ಭಾರೀ ಮಳೆಗೆ ನಗರದ ಹಲವು ಪ್ರಮುಖ ರಸ್ತೆಗಳು ಹಾಗೂ ಜನ ವಸತಿ ಪ್ರದೇಶಗಳು ಜಲಾವೃತವಾಗಿದೆ. ಇನ್ನು ಹೊಸಕೆರೆ ಹಳ್ಳಿಯ ಜನ ವಸತಿ ಪ್ರದೇಶಕ್ಕೆ ಮಳೆ ನೀರು ನುಗ್ಗಿದ ಪರಿಣಾಮ ಮನೆಗಳು ಜಲಾವೃತಗೊಂಡಿದ್ದು, ನೀರು ತುಂಬಿದ್ದ ಮನೆಯೊಳಗೆ ಸಿಲುಕಿದ್ದ ಪುಟ್ಟ ಮಗುವನ್ನು ಎಸ್ಡಿಆರ್ಎಫ್ ಸಿಬ್ಬಂದಿ ರಕ್ಷಿಸಿದ್ದಾರೆ.
ಪದ್ಮನಾಭ ನಗರದ ಬಳಿಯಿರುವ ಹೂಸಕೆರೆಹಳ್ಳಿಯ ದತ್ತಾತ್ರೇಯ ದೇವಸ್ಥಾನದ ಬಳಿಯ ಹಲವು ಮನೆಗಳು ಜಲಾವೃತಗೊಂಡಿದ್ದವು. ಈ ವೇಳೆ ಪುಟಾಣಿ ಮಗುವೊಂದು ನೀರು ತುಂಬಿದ ಮನೆಯಲ್ಲಿ ಸಿಲುಕಿಕೊಂಡಿತ್ತು. ಸ್ಥಳಕ್ಕೆ ಆಗಮಿಸಿದ ಎಸ್ಡಿಆರ್ಎಫ್ ಸಿಬ್ಬಂದಿ ಮಗು ಹಾಗೂ ತಾಯಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದೇ ಪ್ರದೇಶದಲ್ಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ 120 ಕ್ಕೂ ಹೆಚ್ಚು ಮಂದಿಯನ್ನು ಎಸ್ಡಿಆರ್ಎಫ್ ತಂಡ ರಕ್ಷಣೆ ಮಾಡಿದೆ. ಘಟನೆಯ ಬಳಿಕ ಕಂದಾಯ ಸಚಿವ ಆರ್. ಅಶೋಕ್ ಜಲಾವೃತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -