Saturday, April 27, 2024
spot_imgspot_img
spot_imgspot_img

ಬೆಂಗಳೂರಿನಲ್ಲಿ ಮಳೆಯ ಅಬ್ಬರ-ಇಂದು ಕೂಡ ಮಳೆ ಸಾಧ್ಯತೆ

- Advertisement -G L Acharya panikkar
- Advertisement -

ಬೆಂಗಳೂರು (ಅ. 24): ಬೆಂಗಳೂರಿನಲ್ಲಿ ಈಗಾಗಲೇ ನಿನ್ನೆ ಸುರಿದ ಮಳೆಗೆ ಜನರು ತತ್ತರಿಸಿಹೋಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೂಡ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ವಾರಾಂತ್ಯವಾದ್ದರಿಂದ ಇಂದು ವಾಹನ ಸವಾರರಿಗೆ ಹೆಚ್ಚಿನ ತೊಂದರೆ ಆಗಲಾರದು. ಆದರೂ ತಗ್ಗು ಪ್ರದೇಶಗಳಲ್ಲಿರುವ ಮನೆಗಳ ಜನರಿಗೆ ಎಚ್ಚರದಿಂದಿರಲು ಸೂಚಿಸಲಾಗಿದೆ.

ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಸೋಮವಾರದವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ, ಹವಾಮಾನ ಇಲಾಖೆಯಿಂದ ಬೆಂಗಳೂರು, ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಚಿಕ್ಕಮಗಳೂರು, ಕೊಡಗು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಇನ್ನು 3 ದಿನಗಳ ಕಾಲ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ ಸೋಮವಾರದವರೆಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಬೆಂಗಳೂರು, ಹಾಸನ, ರಾಮನಗರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಲಿದೆ. ಅ.26ರಂದು ರಾಜ್ಯದೆಲ್ಲೆಡೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

Related news

error: Content is protected !!