- Advertisement -
- Advertisement -
ಬೆಂಗಳೂರು: ಕೋವಿಡ್ ಗೆ ಪತಿ ಬಲಿಯಾದ ಹಿನ್ನೆಲೆಯಲ್ಲಿ ಮನನೊಂದ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳ ಜೊತೆಗೆ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ನಗರದ ತೋಟದ ಗುಡ್ಡದಹಳ್ಳಿ ಹತ್ತಿರದ ಪ್ರಕೃತಿ ಲೇಔಟ್’ನಲ್ಲಿ ನಡೆದಿದೆ,
ವಸಂತ (40), ಯಶವಂತ್ (15) ಹಾಗೂ ನಿಶ್ಚಿತಾ (8) ಮೃತರು. ಮನೆಯಲ್ಲಿ ತನ್ನ ಇಬ್ಬರು ಮಕ್ಕಳ ಜೊತೆ ವಸಂತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಮನೆಗೆ ಸಂಬ0ಧಿಕರು ರಾತ್ರಿ ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಬಿಎಂಟಿಸಿ ಚಾಲಕ ಕಂ ನಿರ್ವಾಹಕರಾಗಿದ್ದ ವಸಂತ ಅವರ ಪತಿಯು ಕಳೆದ ವರ್ಷ ಕೋವಿಡ್ ಸೋಂಕಿನಿAದ ಮೃತಪಟ್ಟಿದ್ದರು. ಇದರಿಂದ ವಸಂತ ಅವರು ಖಿನ್ನತೆಗೊಳಗಾಗಿದ್ದರು. ಇದರಿಂದ ಮನನೊಂದು ಒಂದೇ ಫ್ಯಾನ್’ಗೆ ಮಗಳು ನಿಶ್ಚಿತಾ ಜೊತೆ ವಸಂತ ನೇಣು ಹಾಕಿಕೊಂಡಿದ್ದರೆ, ಯಶವಂತ್ ಪ್ರತ್ಯೇಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -