Saturday, June 28, 2025
spot_imgspot_img
spot_imgspot_img

ಬೆಂಗಳೂರು: ನಟ ಕಿಚ್ಚ ಸುದೀಪ್ ತಾಯಿ ಸರೋಜಾ ಅನಾರೋಗ್ಯದಿಂದ ನಿಧನ..!

- Advertisement -
- Advertisement -

ಬೆಂಗಳೂರು: ನಟ ಕಿಚ್ಚ ಸುದೀಪ್ ತಾಯಿ ಸರೋಜಾ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಯ ವೇಳೆಗೆ ಕುಟುಂಬಸ್ಥರು ಪಾರ್ಥಿವ ಶರೀರವನ್ನು ಜೆಪಿ ನಗರದ ನಿವಾಸಕ್ಕೆ ತರಲಿದ್ದಾರೆ.

ತಾಯಿಯ ಅನಾರೋಗ್ಯದ ಹಿನ್ನಲೆ ಶನಿವಾರದ ಬಿಗ್ಬಾಸ್ ಶೂಟಿಂಗ್ ಅನ್ನು ಬೇಗನೆ ಮುಕ್ತಾಯಗೊಳಿಸಲಾಗಿತ್ತು. ನಿನ್ನೆಯ ವಾರದ ಪಂಚಾಯಿತಿ ಸಾಮಾನ್ಯಕ್ಕಿಂತಲೂ ಕಡಿಮೆ ಅವಧಿಗೆ ಪ್ರಸಾರವಾಗಿತ್ತು.

ಸುದೀಪ್ ಅವರ ತಾಯಿ ಮಂಗಳೂರು ಮೂಲದವರು. ವಿಕ್ರಾಂತ್ ರೋಣ ಸಮಯದಲ್ಲಿ ಈ ಬಗ್ಗೆ ಮಾತನಾಡಿದ ಸುದೀಪ್ ನನ್ನ ತಾಯಿ ಮಂಗಳೂರು ಮೂಲದವರು. ಅವರ ಮಾತೃಭಾಷೆ ತುಳು. ನನಗೆ ಆ ಭಾಷೆ ಬಹಳ ಇಷ್ಟ ನಾನು ಸಾಕಷ್ಟು ಕೇಳಿಸಿಕೊಂಡಿದ್ದೇನೆ ಆದರೆ ನನಗೆ ಮಾತನಾಡಲು ಬರುವುದಿಲ್ಲ ಎಂದಿದ್ದರು.

ಈ ಸೀಸನ್‌ ಮೊದಲ ವೀಕೆಂಡ್ ಪಂಚಾಯಿತಿಗೆ ಶೇರವಾನಿ ಧರಿಸಿಕೊಂಡು ಬಂದಿದ್ದ ಸುದೀಪ್, ಬರಿಗಾಲಲ್ಲಿ ವೇದಿಕೆಗೆ ಹತ್ತಿದ್ದರು. ನವರಾತ್ರಿ ಇದ್ದ ಕಾರಣ ತಾವು ಹೀಗೆ ಡ್ರೆಸ್ ಮಾಡಿಕೊಂಡು ಬಂದಿದ್ದಾಗಿ ಹೇಳಿದ ಸುದೀಪ್ ಕ್ಯಾಮೆರಾ ನೋಡಿಕೊಂಡು ಅಮ್ಮ ನೋಡಿ ಬರಿಗಾಲಲ್ಲಿ ಬಂದಿದ್ದೀನಿ, ಹಬ್ಬಕ್ಕೆ ತಕ್ಕಂತೆ ಡ್ರೆಸ್ ಮಾಡಿಕೊಂಡಿದ್ರಿನಿ ಎಂದಿದ್ದರು ಈ ಮೂಲಕ ಈ ಸೀಸನ್ ಆರಂಭದಲ್ಲಿ ಅಮ್ಮನನ್ನು ನೆನಪಿಸಿಕೊಂಡಿದ್ದರು.

- Advertisement -

Related news

error: Content is protected !!