Sunday, June 29, 2025
spot_imgspot_img
spot_imgspot_img

ಪದ್ಮಶ್ರೀ ಪುರಸ್ಕೃತೆ, ಜನಪದ ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ ನಿಧನ..!

- Advertisement -
- Advertisement -

ಕಾರವಾರ: ಪದ್ಮಶ್ರೀ ಮತ್ತು ನಾಡೋಜಾ ಪುರಸ್ಕೃತೆ, ಜನಪದ ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ (91) ನಿಧನರಾಗಿದ್ದಾರೆ.ಜನಪದ ಕೋಗಿಲೆ ಎಂದೇ ಪ್ರಖ್ಯಾತ ಪಡೆದ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬಡಿಗೇರಿಯ ಸುಕ್ರಿ ಬೊಮ್ಮಗೌಡ ವಯೋಸಹಜ ಕಾಯಿಲೆಯಿಂದಾಗಿ ಇಂದು ವಿಧಿವಶರಾಗಿದ್ದಾರೆ.

ಹಾಲಕ್ಕಿ ಬುಡಕಟ್ಟು ಜನಾಂಗದಲ್ಲಿ ಹುಟ್ಟಿದ ಇವರು ವಿದ್ಯಾಭ್ಯಾಸ ಮಾಡದಿದ್ದರೂ ಹಾಲಕ್ಕಿ ಜನಾಂಗದ ಜನಪದ ಹಾಡುಗಳನ್ನು ಹಾಡುವ ಮೂಲಕ ಹಳ್ಳಿ ಸೊಗಡನ್ನ ದಿಲ್ಲಿಗೆ ತೆಗೆದುಕೊಂಡು ಹೋದ ಕೀರ್ತಿ ಹೊಂದಿದ್ದಾರೆ. ಇದಲ್ಲದೇ ಮದ್ಯ ಮುಕ್ತ ಗ್ರಾಮ ಮಾಡುವ ಹೋರಾಟದಲ್ಲಿ ಭಾಗಿಯಾದ ಇವರು ತಮ್ಮ ಊರನ್ನು ಮದ್ಯ ಮುಕ್ತ ಗ್ರಾಮವನ್ನಾಗಿಸಿದರು.

2017 ರಲ್ಲಿ ಇವರ ಜನಪದ ಹಾಡಿನ ಸಾಧನೆಗೆ ಪದ್ಮಶ್ರೀ ಪ್ರಶಸ್ತಿ ಸಂದಿದೆ. ರಾಜ್ಯ, ರಾಷ್ಟ್ರ ಮಟ್ಟದ ಹಲವು ಪ್ರಶಸ್ತಿ ಪಡೆದಿದ್ದರು. ಇತ್ತೀಚೆಗೆ ಅನಾರೋಗ್ಯ ಕಾರಣದಿಂದ ಹಾಸಿಗೆ ಹಿಡಿದಿದ್ದರು. ತೀವ್ರ ಉಸಿರಾಟ ಸಮಸ್ಯೆ ಹೊಂದಿದ್ದ ಇವರು ಕೆಲವು ದಿನದ ಹಿಂದೆ ಉಡುಪಿಯಲ್ಲಿ ಚಿಕಿತ್ಸೆ ಪಡೆದು ಮರಳಿ ಬಂದಿದ್ದರು‌. ಆದರೆ, ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ಇಬ್ಬರು ಮೊಮ್ಮೊಕ್ಕಳು, ಓರ್ವ ಸೊಸೆಯನ್ನು ಅಗಲಿದ್ದಾರೆ. ಇಂದು ಬಡಿಗೇರಿಯಲ್ಲಿ ಇವರ ಅಂತ್ಯಸಂಸ್ಕಾರ ನೆರವೇರಲಿದೆ.

- Advertisement -

Related news

error: Content is protected !!