- Advertisement -
- Advertisement -






ದ.ಕ.ಜಿ.ಪಂ., ಸರ್ಕಾರಿ ಪ್ರೌಢಶಾಲೆ ಗುರುವಾಯನಕೆರೆಯ ಕಲಾ ಶಿಕ್ಷಕ ವಿಶ್ವನಾಥ ಕೆ ವಿಟ್ಲರವರಿಗೆ ಸರ್ಕಾರ ರಾಜ್ಯಮಟ್ಟದ ವಿಶೇಷ ಶಿಕ್ಷಕನೆಂಬ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಶಾಲಾ ಶಿಕ್ಷಣ ಇಲಾಖೆಯು ಸರ್ಕಾರಿ ಪ್ರಾಥಮಿಕ ಶಾಲೆಯ 20 ಮತ್ತು ಪ್ರೌಢಶಾಲೆಯ 11 ಶಿಕ್ಷಕರು, ಪದವಿಪೂರ್ವ 8 ಉಪನ್ಯಾಸಕರು ಹಾಗೂ ಇಬ್ಬರು ಪ್ರಾಂಶುಪಾಲರು ಸೇರಿ 2024-25ನೇ ಸಾಲಿಗೆ ಒಟ್ಟು 41 ಶಿಕ್ಷಕರಿಗೆ ‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಯನ್ನು ಘೋಷಿಸಿದೆ.
ಈ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರು, ಮುಖ್ಯ ಶಿಕ್ಷಕರು, ವಿಶೇಷ ಶಿಕ್ಷಕರುಗಳಿಗೆ ಸರ್ಕಾರದ ಆದೇಶ ಸಂಖ್ಯೆ: ಇಪಿ 308 ಪಿಬಿಎಸ್ 2021, ದಿನಾಂಕ: 12.09.2022 ರ ಅನುಸಾರ ತಲಾ ರೂ.25,000 ರೂ. ನಂತೆ ಒಟ್ಟು 7,75,000 ರೂ. ಗಳ ನಗದು ಪುರಸ್ಕಾರ ನೀಡಲು ಹಾಗೂ ಸದರಿ ವೆಚ್ಚವನ್ನು ರಾಜ್ಯ ಶಿಕ್ಷಣ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ಬೆಂಗಳೂರು ಇಲ್ಲಿಂದ ಭರಿಸಲು ಅನುಮತಿ ನೀಡಿ ಆದೇಶಿಸಿದೆ.
- Advertisement -