Saturday, June 28, 2025
spot_imgspot_img
spot_imgspot_img

ಭಟ್ಕಳ: ನೇಣು ಬಿಗಿದು ತಾಯಿ- ಮಗಳು ಆತ್ಮಹತ್ಯೆ..!

- Advertisement -
- Advertisement -

ಭಟ್ಕಳ: ತಾಯಿ ಮತ್ತು ಮಗಳು ಒಂದೇ ದಿನ ನೇಣಿಗೆ ಶರಣಾದ ಘಟನೆ ತಾಲೂಕಿನ ಯಲ್ವಡಿಕವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋರಿಕಲ್ಲು ಮನೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಗೋರಿಕಲ್ಲು ಮನೆಯ ಕೃಷ್ಣಮ್ಮ ನಾರಾಯಣ ನಾಯ್ಕ (57) ಹಾಗೂ ಅವರ ಮಗಳು ಮಾದೇವಿ ದೊಡ್ಡಯ್ಯ ನಾಯ್ಕ (36) ಎಂದು ಗುರುತಿಸಲಾಗಿದೆ.

ಕೃಷ್ಣಮ್ಮ ಅವರ ಮಗಳು ಮಾದೇವಿ ತಾಯಿಯ ಮನೆಯ ಸಮೀಪದಲ್ಲಿಯೇ ಮನೆ ಮಾಡಿಕೊಂಡು ವಾಸ್ತವ್ಯ ಮಾಡಿಕೊಂಡು ಬಂದಿದ್ದಳು. ಓರ್ವ ಮಗಳು ಹಾಗೂ ಓರ್ವ ಮಗನಿದ್ದಾನೆ. ಮನೆಯಲ್ಲಿದ್ದವರೆಲ್ಲರೂ ಸಂಬಂಧಿಕರ ಮದುವೆ ಹೋಗಿರುವುದರಿಂದ ಒಬ್ಬಳೇ ಇದ್ದ ಮಾದೇವಿ ನೇಣಿಗೆ ಶರಣಾಗಿದ್ದಾರೆ .ಮಾದೇವಿ ಮನೆಗೆ ಬಂದ ಕೃಷ್ಣಮ್ಮ ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದನ್ನು ನೋಡಿ ಆಘಾತಕ್ಕೆ ಒಳಗಾಗಿ ಮನೆಗೆ ಹೋಗಿ ತಾನೂ ಕೂಡಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಮದ್ಯೆ ಮಾದೇವಿ ಈಕೆಯು ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು ಅದರಲ್ಲಿ ನನ್ನ ಶವವನ್ನು ತಾಯಿ ಹಾಗೂ ಸಹೋದರ ನೋಡಬಾರದು ಎಂದು ಬರೆದಿಟ್ಟಿದ್ದಾಳೆ ಎನ್ನಲಾಗಿದೆ. ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲು ಮಾಡಿದ್ದಾರೆ. ಇಬ್ಬರ ಸಾವಿಗೆ ಕಾರಣ ಇನ್ನೂ ಕೂಡ ಅಸ್ಪಷ್ಟವಾಗಿದ್ದು, ಪೊಲೀಸ್ ತನಿಖೆ ಮುಂದುವರೆದಿದೆ.

- Advertisement -

Related news

error: Content is protected !!