- Advertisement -
- Advertisement -
ಬೀದರ್: ಇಲ್ಲಿನ ಔರಾದ್ ಪಟ್ಟಣದಲ್ಲಿ ಪ್ರಾಥಮಿಕ ಶಾಲೆಯೊಂದರ ಶಿಕ್ಷಕನ ಮರ್ಮಾಂಗವನ್ನು ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಕೊಲೆಯಾದ ಶಿಕ್ಷಕ ಬೀದರ್ ಜಿಲ್ಲೆಯ ಔರಾದ್ ನ ಲಿಡ್ಕರ್ ಕಾಲನಿ ನಿವಾಸಿ ವಿಜಯ್ ಕುಮಾರ್ ಟೀಳೆಕರ್ (46) ಎನ್ನಲಾಗಿದೆ. ಇವರು ಔರಾದ್ ನ ಕರಂಜಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಎಸ್ ಪಿ ಡಿ.ಎಲ್.ನಾಗರಾಜ್, ಎಎಸ್ ಪಿ ಪೃಥ್ವಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆ ಮಾಡಿದ್ದು ಯಾರು, ಹತ್ಯೆಗೆ ಕಾರಣವೇನೆಂದು ಪೊಲೀಸರ ತನಿಖೆಯ ಬಳಿಕವಷ್ಟೇ ತಿಳಿದು ಬರಬೇಕಿದೆ. ಈ ಘಟನೆ ಬಗ್ಗೆ ಔರಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -