- Advertisement -
- Advertisement -
ಕರ್ನಾಟಕ: ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಮತ್ತೆ ಲಾಕ್ಡೌನ್ ಬಿಸಿ ತಟ್ಟಿದೆ. ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿಯಮ ಹೊರಬಿದ್ದಿದೆ.
ರಾಜ್ಯ ಇನ್ನು 14 ದಿನಗಳ ಕಾಲ ಲಾಕ್ಡೌನ್ ಆಗಲಿದೆ. ರಾಜ್ಯ ಸರ್ಕಾರ ಕೊರೊನಾ ನಿಯಂತ್ರಿಸುವ ದೃಷ್ಟಿಯಿಂದ ಲಾಕ್ಡೌನ್ ಬ್ರಹ್ಮಾಸ್ತ್ರವನ್ನು ಹೂಡಿದೆ. ನಾಳೆ ರಾತ್ರಿಯಿಂದ ಕರ್ಫ್ಯೂ ಜಾರಿಗೆ ಬರಲಿದೆ.
ನಾಳೆ ರಾತ್ರಿಯಿಂದಲೇ ಲಾಕ್ ಡೌನ್ ಮಾಡಲಾಗುತ್ತಿದ್ದ ಬೆಳಗ್ಗೆ ಗಂಟೆ 6 ರಿಂದ 10ರವರೆಗೆ ಅವಶ್ಯಕ ವಸ್ತುಗಳ ಖರೀದಿಗೆ ಅವಕಾಶವಿದೆ. ಈ ಕುರಿತಂತೆ ಸಿಎಂ ಸುದ್ದಿಗೋಷ್ಟಿ ನಡೆಸಲಿದ್ದಾರೆ. ಕೊರೊನಾ ನಿಯಂತ್ರಣ ಸಾಧ್ಯವಾಗದೇ ಇದ್ದರೆ ಲಾಕ್ಡೌನ್ ಮತ್ತೆ ಮುಂದುವರಿಯಲಿದೆ.
- Advertisement -