- Advertisement -
- Advertisement -


ನವದೆಹಲಿ: ಗ್ರಾಹಕರ ದಾರಿ ತಪ್ಪಿಸುವ ಜಾಹೀರಾತು ಪ್ರಕಟಿಸುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಆಯುರ್ವೇದ ಮತ್ತು ಅದರ ಸಂಸ್ಥಾಪಕ ಬಾಬಾ ರಾಮ್ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಆರೋಪವನ್ನು ಸುಪ್ರೀಂ ಕೋರ್ಟ್ ಕೈಬಿಟ್ಟಿದೆ.
ನ್ಯಾಯಮೂರ್ತಿ ಹಿಮಾ ಕೊಹ್ಲಿ ಮತ್ತು ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ದ್ವಿಸದಸ್ಯ ಪೀಠವು ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಿ, ತೀರ್ಪು ಪ್ರಕಟಿಸಿದೆ.
ಕಂಪನಿ ಮತ್ತು ಅದರ ಸಂಸ್ಥಾಪಕ ನ್ಯಾಯಾಲಯದ ಆದೇಶದ ಉಲ್ಲಂಘನೆ ಹಿನ್ನಲೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿತ್ತು. ಬಳಿಕ ರಾಮ್ದೇವ್ ಅವರು ನವೆಂಬರ್ 2023ರ ಸುದ್ದಿಗೋಷ್ಠಿಯಲ್ಲಿ ಕ್ಷಮೆಯಾಚಿಸಿದ್ದರು. ಈ ಬಗ್ಗೆ ಪತ್ರಿಕೆಗಳಲ್ಲಿಯೂ ಕ್ಷಮಾಪಣೆ ಪ್ರಕಟಿಸಿದ್ದರು.
- Advertisement -