Monday, April 29, 2024
spot_imgspot_img
spot_imgspot_img

ಮದ್ಯದ ಅಮಲು, ಅತಿವೇಗದ ಚಾಲನೆ; ಬಿಎಂಡಬ್ಲ್ಯು ಬೈಕ್ ಕಂಬಕ್ಕೆ ಡಿಕ್ಕಿ

- Advertisement -G L Acharya panikkar
- Advertisement -

ಕಂಬಕ್ಕೆ ಬಿಎಂಡಬ್ಲ್ಯೂ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಯಶವಂತಪುರದ ಆರ್ ಎಂಸಿ ಯಾರ್ಡ್ ಬಳಿ ಅಪಘಾತ ಸಂಭವಿಸಿದ್ದು, ಮೃತಪಟ್ಟವರನ್ನು ಮನಮೋಹನ್ ( 31) ಹಾಗೂ ನಿಖಿಲ್ (25) ಎಂದು ಗುರುತಿಸಲಾಗಿದೆ.

ಯುವಕರು ಬಿಎಂಡಬ್ಲ್ಯೂ ಬೈಕ್‌ ಚಲಾಯಿಸುತ್ತಿದ್ದರು. ಯಶವಂತಪುರದಿಂದ ಆರ್‌ಎಮ್‌ಸಿ ಯಾರ್ಡ್ ರೋಡ್ ಕಡೆ ಡ್ರೈವ್ ಮಾಡುತ್ತಿದ್ದ ಇವರು ಮದ್ಯ ಸೇವಿಸಿದ್ದರು ಹಾಗೂ ಅತಿವೇಗದಿಂದ ಚಾಲನೆ ಮಾಡಿದ್ದು,ಇಬ್ಬರೂ ಹೆಲ್ಮೆಟ್ ಕೂಡ ಧರಿಸಿರಲಿಲ್ಲ. ಸ್ನೇಹಿತರ ಜೊತೆ ಪಾರ್ಟಿ ಮುಗಿಸಿ ಮನಮೋಹನ್, ನಿಖಿಲ್ ಮನೆಗೆ ವಾಪಸಾಗುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ. ಅತೀ ವೇಗದಿಂದಾಗಿ ನಿಯಂತ್ರಣ ಸಿಗದೆ ಬೈಕ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇಬ್ಬರೂ ಬೈಕ್‌ನಿಂದ ದೂರಕ್ಕೆ ಹಾರಿಬಿದ್ದಿದ್ದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಯಶವಂತಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement -

Related news

error: Content is protected !!